ರಾಜ್ಯದಲ್ಲಿ ಮಹಾರಾಷ್ಟ್ರ ಮಾದರಿಯಲ್ಲೇ ಸರ್ಕಾರ ಪತನಗೊಳ್ಳುತ್ತದೆ: ಯತ್ನಾಳ್

Prasthutha|

ಕುಮುಟಾ:ಲೋಕಸಭೆ ಚುನಾವಣೆ ಬಳಿಕ ರಾಜ್ಯದಲ್ಲೂ ಮಹಾರಾಷ್ಟ್ರ ಮಾದರಿಯಲ್ಲೇ ಸರ್ಕಾರ ಪತನಗೊಳ್ಳುತ್ತದೆ. ಏಕನಾಥ ಶಿಂಧೆ, ಅಜಿತ್‌ ಪವಾರ್‌ ಪಾತ್ರಧಾರಿಗಳು ಕಾಂಗ್ರೆಸ್‍ನಲ್ಲಿ ಸಿದ್ಧರಾಗಿದ್ದಾರೆ ಎಂದು ಬಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

- Advertisement -

ಪಟ್ಟಣದಲ್ಲಿ ಗುರುವಾರ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು ಹೀಗೆ ಹೇಳಿದರು. ಇದೇ ಸಂದರ್ಭ ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯೂ ಆಗಿರುವ ಡಾ. ಕೆ.ಸುಧಾಕರ್ ವಿರುದ್ಧವೂ ಅವರು ಅಸಮಾಧಾನ ವ್ಯಕ್ತಪಡಿಸಿದರು.

ಸುಧಾಕರ್ ಹಿಂದೆ ಸಚಿವರಾಗಿದ್ದಾಗ ಶಾಸಕರಿಗೆ ಸರಿಯಾಗಿ ಸ್ಪಂದಿಸುತ್ತಿರಲಿಲ್ಲ. ಹಲವು ಶಾಸಕರು ಕಣ್ಣೀರು ಹಾಕಿದ್ದಾರೆ, ಪಕ್ಷ ಅಂತಹ ತಪ್ಪಿನಿಂದ ಸೋತಿದೆ. ಉತ್ತರಕನ್ನಡ ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಆಗಲೇ ಆಗಬೇಕಿತ್ತು. ಅಂತವರ ತಪ್ಪಿನಿಂದ ಜಿಲ್ಲೆಯಲ್ಲಿ ಪಕ್ಷದ ಅಭ್ಯರ್ಥಿ ಗೆಲ್ಲಲಿಲ್ಲ ಎಂದರು.

- Advertisement -

ಮಾಜಿ‌ ಸಿಎಂ ಯಡಿಯೂರಪ್ಪ ಕುಟುಂಬದ ಬಗ್ಗೆಯೂ ಅವರು ಅಸಹನೆ ಹೊರಹಾಕಿದ್ದು, ರಾಜ್ಯದಲ್ಲಿ ಅಪ್ಪ, ಮಕ್ಕಳು, ಮಾವ, ಅಳಿಯ ಇವರೇ ಬಿಜೆಪಿಯಲ್ಲಿ ಕ್ಯಾಂಡಿಡೇಟ್ ಆಗಿದ್ದಾರೆ ಎಂದರು.

Join Whatsapp