ಹಾವೇರಿ ಕೇಸ್ | ಯಾರ ರಕ್ಷಣೆಯನ್ನೂ ಸರ್ಕಾರ ಮಾಡಲ್ಲ: ಗೃಹ ಸಚಿವ ಪರಮೇಶ್ವರ್

Prasthutha|

ಬೆಂಗಳೂರು: ಹಾವೇರಿಯಲ್ಲಿ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣದಲ್ಲಿ ಕೆಲವರ ಬಂಧನವಾಗಿದೆ. ಈ ಪ್ರಕರಣದಲ್ಲಿ ಯಾರನ್ನೂ ರಕ್ಷಣೆ ಮಾಡುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.

- Advertisement -


ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾವೇರಿ ಕೇಸ್ ತನಿಖೆ ನಡೆಯುತ್ತಿದೆ. ಮೊದಲು ಆಕೆ ಗ್ಯಾಂಗ್ ರೇಪ್ ಎಂದು ದೂರು ಕೊಟ್ಟಿರಲಿಲ್ಲ. ನಂತರ ಆಕೆ ರೇಪ್ ಎಂದು ದೂರು ಕೊಟ್ಟಿದ್ದಾರೆ. ಈಗಾಗಲೇ ಪ್ರಕರಣದಲ್ಲಿ ಹಲವರ ಬಂಧನ ಅಗಿದೆ. ಈ ಬಗ್ಗೆ ತನಿಖೆ ನಡೆಯಲಿದೆ. ತನಿಖೆ ಬಳಿಕ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಅವರು ಹೇಳಿದ್ದಾರೆ

Join Whatsapp