Home ಟಾಪ್ ಸುದ್ದಿಗಳು ಸರ್ಕಾರದ ಲಂಚದ ಆಸೆಗೆ ಬಲಿಪಶುಗಳಾದ ಪದವೀಧರ ವಿದ್ಯಾರ್ಥಿಗಳು: ಕಾಂಗ್ರೆಸ್

ಸರ್ಕಾರದ ಲಂಚದ ಆಸೆಗೆ ಬಲಿಪಶುಗಳಾದ ಪದವೀಧರ ವಿದ್ಯಾರ್ಥಿಗಳು: ಕಾಂಗ್ರೆಸ್

ಬೆಂಗಳೂರು: ರಾಜ್ಯದಲ್ಲಿ ಖಾಲಿಯಿರುವ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ, ರಾಜ್ಯ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳ ಒಕ್ಕೂಟದ ನೇತೃತ್ವದಲ್ಲಿ ನೂರಾರು ಪದವೀಧರರು ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ರಾಜ್ಯದಲ್ಲಿ 2.5 ಲಕ್ಷಕ್ಕೂ ಹೆಚ್ಚಿನ ಉದ್ಯೋಗಗಳು ಖಾಲಿಯಿದ್ದರೂ ಸರ್ಕಾರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳುವಲ್ಲಿ ಸರ್ಕಾರವು ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿರುವ ಪ್ರತಿಭಟನಕಾರರು ‘ಲಂಚ ತೆಗೆದುಕೊಳ್ಳಿ ಕೆಲಸ ಕೊಡಿ’ ಎಂದು ಕವರ್‌ನಲ್ಲಿ ಬರೆದು ವಿಭಿನ್ನವಾಗಿ ಪ್ರತಿಭಟಿಸಿದರು.

ಈ ಬಗ್ಗೆ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್, ಉದ್ಯೋಗಾಕಾಂಕ್ಷಿಗಳ ಬಳಿ ಪುಸ್ತಕ, ಪೆನ್ನು, ಭವಿಷ್ಯದ ಕನಸು ಬಿಟ್ಟರೆ ಬೇರೇನೂ ಇಲ್ಲ. ಸರ್ಕಾರಕ್ಕೆ ಲಂಚದ ಆಸೆ, ಕಮಿಷನ್ ಲಾಲಸೆ ಬಿಟ್ಟರೆ ಬೇರೇನೂ ಇಲ್ಲ ಎಂದು ಟೀಕಿಸಿದೆ.

40 ಪರ್ಸೆಂಟ್ ಸರ್ಕಾರ ನಡೆಸಿದ PSI ಅಕ್ರಮದಿಂದಾಗಿ ಪ್ರಾಮಾಣಿಕ ಅಭ್ಯರ್ಥಿಗಳ ವಯಸ್ಸು ಮೀರುತ್ತಿದೆ, ಬದುಕು ಛಿದ್ರವಾಗಿದೆ. ಇವರ ಆತಂತ್ರದ ಬದುಕಿಗೆ ಪರಿಹಾರವೇನು ಎಂದು ಕಾಂಗ್ರೆಸ್ ಸಿ ಎಂ ಬೊಮ್ಮಾಯಿಯವರನ್ನು ಪ್ರಶ್ನಿಸಿದೆ.

Join Whatsapp
Exit mobile version