ಅನೈತಿಕ ಸಂಬಂಧ ಗ್ರಾಮ ಪಂಚಾಯಿತಿ ಸದಸ್ಯ ಮತ್ತವರ ಪ್ರೇಯಸಿ ಜೋಡಿ ಕೊಲೆ: ಆರೋಪಿ ಬಂಧನ

Prasthutha|

ಆನೇಕಲ್: ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಬ್ಯಾಗಡದೇನಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ನಾರಾಯಣಸ್ವಾಮಿ (ದಾಸ) ಮತ್ತು ಆತನ ಪ್ರೇಯಸಿ ಕಾವ್ಯಾ ಎಂಬವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಸೂರ್ಯನಗರ ಪೊಲೀಸರು ಬಂಧಿಸಿದ್ದಾರೆ.

- Advertisement -

ಕೊಲೆಯಾದ ಕಾವ್ಯಾ ಅವರ ಪತಿ ಚಿಕ್ಕಹಾಗಡೆ ಮುತ್ತುರಾಜ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.

ತನ್ನ ಪತ್ನಿಯೊಂದಿಗೆ ನಾರಾಯಣಸ್ವಾಮಿ ಅನೈತಿಕ ಸಂಬಂಧ ಹೊಂದಿದ್ದ ಹಿನ್ನೆಲೆಯಲ್ಲಿ ಅವರಿಬ್ಬರನ್ನು ಚಾಕುವಿನಿಂದ ಇರಿದು ಕೊಲೆಗೈದಿರುವುದಾಗಿ ಆರೋಪಿ ಮುತ್ತುರಾಜ್ ವಿಚಾರಣೆ ವೇಳೆ ಬಾಯಿಬಿಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

- Advertisement -

ಪ್ರಕರಣದಲ್ಲಿ ಬೇರೆಯವರ ಕೈವಾಡ ಇದೆಯೇ ಎಂಬುದರ ಬಗ್ಗೆ ತನಿಖೆ ಮಾಡಲು ಎರಡು ತಂಡಗಳನ್ನು ರಚನೆ ಮಾಡಿದ್ದು, ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಬೆಂಗಳೂರು ಗ್ರಾಮಾಂತರ ಎಸ್ಪಿ ಡಾ.ಕೆ.ವಂಶಿಕೃಷ್ಣ ತಿಳಿಸಿದ್ದಾರೆ.

Join Whatsapp