ಮತ ಎಣಿಕೆ ನಿರತ ಚುನಾವಣಾಧಿಕಾರಿ ಹೃದಯಾಘಾತಕ್ಕೆ ಬಲಿ

Prasthutha|

ಮೈಸೂರು : ರಾಜ್ಯದಲ್ಲಿ ಎರಡು ಹಂತದಲ್ಲಿ ನಡೆದ ಗ್ರಾಮ ಪಂಚಾಯಿತಿ ಚುನಾವಣಾ ಫಲಿತಾಂಶ ಪ್ರಕಟನೆ ಆರಂಭಗೊಂಡಿದ್ದು, ಮತ ಎಣಿಕೆ ಭರದಿಂದ ಸಾಗಿದೆ. ಈ ನಡುವೆ, ಮೈಸೂರಿನಲ್ಲಿ ಕರ್ತವ್ಯನಿರತ ಚುನಾವಣಾಧಿಕಾರಿ ಮೃತಪಟ್ಟಿರುವ ಘಟನೆ ವರದಿಯಾಗಿದೆ.

- Advertisement -

ಪಿರಿಯಾಪಟ್ಟಣದ ಪುಷ್ಪಾ ಕಾನ್ವೆಂಟ್​ ಮತ ಎಣಿಕೆ ಕೇಂದ್ರದಲ್ಲಿ ಎನ್. ಶೆಟ್ಟಹಳ್ಳಿ ಗ್ರಾ.ಪಂ. ಚುನಾವಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಬೋರೇಗೌಡ (52) ಸಾವಿಗೀಡಾಗಿದ್ದಾರೆ. ಕರ್ತವ್ಯದಲ್ಲಿದ್ದಾಗಲೇ ಎದೆ ನೋವು ಕಾಣಿಸಿಕೊಂಡಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ ಎಂದು ವರದಿಗಳು ತಿಳಿಸಿವೆ.

Join Whatsapp