ಭಾರತದ ಸ್ಥಿತಿ ಹೃದಯ ವಿದ್ರಾವಕ | ಜಾಗತಿಕ ಸಮುದಾಯ ನೆರವಿಗೆ ಧಾವಿಸಬೇಕು : ಗ್ರೇಟಾ ಥನ್ಬರ್ಗ್

Prasthutha|

ಹೊಸದಿಲ್ಲಿ :  ಭಾರತದಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹಚ್ಚಾಗುತ್ತಲೇ ಇದ್ದು, ದೇಶಾದ್ಯಂತ ಆಕ್ಸಿಜನ್ ಕೊರತೆಯಿಂದ ಜನರು ಕಂಗಾಲಾಗಿದ್ದಾರೆ. ಈ ನಡುವೆ ಸ್ವೀಡನ್ ನ ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್ಬರ್ಗ್ ಭಾರತದ ಬೆಳವಣಿಗೆಗಳ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

- Advertisement -

ಭಾರತದಲ್ಲಿನ ಆಕ್ಸಿಜನ್ ಕೊರತೆ ವಿಚಾರವಾಗಿ ಟ್ವೀಟ್ ಮಾಡಿರುವ ಗ್ರೇಟಾ, ‘ಭಾರತದ ಇತ್ತೀಚಿನ ಬೆಳವಣಿಗೆಗಳು ಹೃದಯ ವಿದ್ರಾವಕವಾಗಿದೆ. ಜಾಗತಿಕ ಸಮುದಾಯವು ಎಚ್ಚೆತ್ತುಕೊಂಡು ತಕ್ಷಣವೇ ಅಗತ್ಯವಾದ ಸಹಾಯವನ್ನು ನೀಡಬೇಕು’ ಎಂದು ಹೇಳಿದ್ದಾರೆ.

ಭಾರತದಲ್ಲೀಗ ವಿಶ್ವದಲ್ಲೇ ಅತ್ಯಂತ ಹೆಚ್ಚು ದೈನಂದಿನ ಕೊರೋನ ಪ್ರಕರಣ ವರದಿಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 3.46 ಲಕ್ಷಕ್ಕೂ ಅಧಿಕ ಕೋವಿಡ್ ಸೋಂಕು ಪ್ರಕರಣ ವರದಿಯಾಗಿದೆ. 2,624 ಜನರು ಸಾವನ್ನಪ್ಪಿದ್ದಾರೆ.

- Advertisement -

ಈ ಹಿಂದೆ ಭಾರತದ ರೈತರ ಹೋರಾಟವನ್ನು ಬೆಂಬಲಿಸಿ ಟ್ವೀಟ್ ಮಾಡಿದ್ದ ಗ್ರೇಟಾ ಥನ್ಬರ್ಗ್ ವ್ಯಾಪಕ ಮಿಶ್ರ ಪ್ರತಿಕ್ರಿಯೆ ಪಡೆದಿದ್ದರು.

Join Whatsapp