Home ಟಾಪ್ ಸುದ್ದಿಗಳು ತೊಂದರೆಗೆ ಸಿಲುಕಿ ಹಾಕಿಕೊಳ್ಳಬಾರದು ಎಂಬ ಕಾರಣಕ್ಕೆ ಸಿದ್ದರಾಮಯ್ಯ ಪರ ಜಿ.ಟಿ.ದೇವೇಗೌಡ ಮಾತನಾಡಿರಬೇಕು: ಕುಮಾರಸ್ವಾಮಿ

ತೊಂದರೆಗೆ ಸಿಲುಕಿ ಹಾಕಿಕೊಳ್ಳಬಾರದು ಎಂಬ ಕಾರಣಕ್ಕೆ ಸಿದ್ದರಾಮಯ್ಯ ಪರ ಜಿ.ಟಿ.ದೇವೇಗೌಡ ಮಾತನಾಡಿರಬೇಕು: ಕುಮಾರಸ್ವಾಮಿ

ಬೆಂಗಳೂರು: ಜಿ.ಟಿ.ದೇವೇಗೌಡ ಮೈಸೂರಿನವರು. ತಾನು ತೊಂದರೆಗೆ ಸಿಲುಕಿ ಹಾಕಿಕೊಳ್ಳಬಾರದು ಎಂಬ ಕಾರಣಕ್ಕೆ ಸಿದ್ದರಾಮಯ್ಯರ ಪರವಾಗಿ ಮಾತನಾಡಿರಬೇಕು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.


ಮೈಸೂರು ದಸರಾ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಜೆಡಿಎಸ್ ಶಾಸಕ, ಮುಡಾ ಸದಸ್ಯರೂ ಆಗಿರುವ ಜಿಟಿ ದೇವೇಗೌಡ ಸಿಎಂ ಸಿದ್ದರಾಮಯ್ಯ ಬಗ್ಗೆ ಹೊಗಳಿರುವುದು ಮತ್ತು ಜೆಡಿಎಸ್ ನಾಯಕರಿಗೆ ಟಾಂಗ್ ಕೊಟ್ಟ ವಿಚಾರವಾಗಿ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.


ಮಾಧ್ಯಮದವರ ಜೊತೆ ಮಾತನಾಡಿದ ಅವರು, ಎಫ್ ಐಆರ್ ಆಗಿರುವ ಕಾರಣಕ್ಕೆ ನಾನು ಮುಖ್ಯಮಂತ್ರಿ ಸಿದ್ದರಾಮಯ್ಯರ ರಾಜೀನಾಮೆ ಕೇಳಿಲ್ಲ, ಈಗ ಅವರು ನಡೆದುಕೊಳ್ತಾ ಇರುವ ರೀತಿಗೆ ನಾವು ರಾಜೀನಾಮೆ ಕೊಡಿ ಅಂತ ಒತ್ತಾಯಿಸಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.


ಎಫ್ ಐ ಆರ್ ಆಗಿದ್ದವರೆಲ್ಲೂ ರಾಜೀನಾಮೆ ಕೊಡಿ ಅಂತ ನಾನು ಕೇಳೊಲ್ಲ. ಇದೇ ಕಾರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೊಡಲಿ ಎಂದು ನಾನು ಮೊದಲಿಂದಲೂ ಕೇಳಿಯೇ ಇಲ್ಲ. ನಾನು ರಾಜೀನಾಮೆ ಕೊಡಬೇಕಾದ ಸಂದರ್ಭಕ್ಕೆ ಕೊಡ್ತಿನಿ ಎಂದರು.

Join Whatsapp
Exit mobile version