ಗ್ಯಾರಂಟಿ ಯೋಜನೆಗಳು ಸರ್ಕಾರಕ್ಕೆ ಹೊರೆ ನಿಜ ಆದರೆ, ಸಿದ್ದರಾಮಯ್ಯ ಉತ್ತಮವಾಗಿ ನಿರ್ವಹಿಸುತ್ತಿದ್ದಾರೆ: ಎಚ್.ಕೆ.ಪಾಟೀಲ್

Prasthutha|

ಶಿರಸಿ: ಗ್ಯಾರಂಟಿ ಯೋಜನೆಗಳು ಹೊರೆಯಾಗಿರುವುದು ನಿಜ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತಮವಾಗಿ ನಿರ್ವಹಿಸುತ್ತಿದ್ದಾರೆಂದು ಪ್ರವಾಸೋದ್ಯಮ ಸಚಿವ ಎಚ್. ಕೆ ಪಾಟೀಲ್ ಅವರು ಸೋಮವಾರ ಹೇಳಿದರು.

- Advertisement -

ಶಿರಸಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ಬಜೆಟ್ ನಲ್ಲಿ ಹೆಚ್ಚುವರಿ ತೆರಿಗೆ ಒಳಗೊಂಡ ಯೋಜನೆಗಳನ್ನು ಮುಂದುವರಿಸಲು ಸರ್ಕಾರ ವಿವಿಧ ಮೂಲಗಳ ಮೂಲಕ ಆದಾಯ ಗಳಿಸಲು ಚಿಂತನೆ ನಡೆಸುತ್ತಿದೆ ಎಂದು ಹೇಳಿದರು.



Join Whatsapp