ಗುಜರಾತ್: ದೋಣಿ ದುರಂತದಲ್ಲಿ ಮೃತರ ಸಂಖ್ಯೆ 16ಕ್ಕೆ ಏರಿಕೆ: 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ

Prasthutha|

ವಡೋದರಾ: ಗುಜರಾತ್’ನ ವಡೋದರಾ ನಗರದ ಹೊರವಲಯದಲ್ಲಿರುವ ಹರ್ನಿ ಸರೋವರದಲ್ಲಿ ಗುರುವಾರ‌ ನಡೆದ ದೋಣಿ ದುರಂತದಲ್ಲಿ ಮೃತರಾದವರ ಸಂಖ್ಯೆ 16ಕ್ಕೆ ಏರಿದೆ. ದೋಣಿಯಲ್ಲಿ 27 ವಿದ್ಯಾರ್ಥಿಗಳು ಇದ್ದು, ಸೇಫ್ಟಿ ಸಂಬಂಧವಾಗಿ ಎಚ್ಚರಿಕೆ ವಹಿಸದೇ ಮೃತರ ಸಂಖ್ಯೆ ಹೆಚ್ಚಾಗಿದೆ.

- Advertisement -

ಪ್ರಧಾನಿ ಮೋದಿ X ಮೂಲಕ ತೀವ್ರ ದುಃಖ ವ್ಯಕ್ತ ಪಡೆಸಿದ್ದು, ಪ್ರಾಣ ಕಳೆದುಕೊಂಡವರಿಗೆ ಪ್ರಧಾನಿ ಕಚೇರಿ 2 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ. ಗಾಯಾಳುಗಳಿಗೆ 50,000 ರೂಪಾಯಿ ಘೋಷಿಸಿದೆ. ಈ ದುಃಖದ ಸಮಯದಲ್ಲಿ ದುಃಖಿತ ಕುಟುಂಬಗಳೊಂದಿಗೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರ ಗುಣಮುಖರಾಗಲಿ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುತ್ತಿದೆ ಎಂದು ಪ್ರಧಾನಿ ಹೇಳಿದ್ದಾರೆ.

Join Whatsapp