ಕಾವೇರುತ್ತಿರುವ ಗುಜರಾತ್ ಚುನಾವಣಾ ಕಣ: ಎಎಪಿ ಸೇರಿದ ಬಿಜೆಪಿ ಶಾಸಕ

Prasthutha|

ಅಹಮದಾಬಾದ್: ಗುಜರಾತ್ ವಿಧಾನಸಭೆ ಚುನಾವಣೆಯ ಕಣ ಕಾವೇರುತ್ತಿರುವ ಮಧ್ಯೆ ಟಿಕೆಟ್ ನಿರಾಕರಿಸಲ್ಪಟ್ಟ ಬಿಜೆಪಿ ಶಾಸಕ ಕೇಸರಿಸಿಂಹ ಸೋಲಂಕಿ ಅವರು ಪಕ್ಷ ತೊರೆದು ಆಮ್ ಆದ್ಮಿ ಪಕ್ಷ ಸೇರ್ಪಡೆಯಾಗಿದ್ದಾರೆ.

- Advertisement -

ಮತರ್ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಕೇಸರಿಸಿಂಹ ಸೋಲಂಕಿ ಅವರು ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಸೇರ್ಪಡೆಯಾಗುವುದಾಗಿ ಎಎಪಿ ರಾಜ್ಯಾಧ್ಯಕ್ಷ ಗೋಪಾಲ್ ಇಟಾಲಿಯ ಟ್ವೀಟ್’ನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಗೋಪಾಲ್ ಇಟಾಲಿಯ, ಕೇಸರಿಸಿಂಹ ಸೋಲಂಕಿ ಅವರು ಜನಪ್ರಿಯ, ಶ್ರಮಜೀವಿ, ಮತರ್ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದು, ಅವರು ಅರವಿಂದ್ ಕೇಜ್ರಿವಾಲ್ ಅವರ ಪ್ರಾಮಾಣಿಕ ರಾಜಕೀಯದಿಂದ ಪ್ರೇರಿತರಾಗಿ ಇಂದು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ನಾನು ಕೇಸರಿಸಿಂಹ ಸೋಲಂಕಿ ಅವರನ್ನು ಪಕ್ಷಕ್ಕೆ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ನಾವು ಒಟ್ಟಾಗಿ ಗುಜರಾತ್’ನಲ್ಲಿ ಪ್ರಾಮಾಣಿಕ ಸರ್ಕಾರವನ್ನು ರಚಿಸುತ್ತೇವೆ ಎಂದು ಗುರುವಾರ ತಡರಾತ್ರಿ ಟ್ವೀಟ್’ನಲ್ಲಿ ತಿಳಿಸಿದ್ದಾರೆ.

Join Whatsapp
Exit mobile version