ಗುಜರಾತ್: ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಸಿಲುಕಿ ಮಹಿಳೆ ಬಲಿ!

Prasthutha|

ಗುಜರಾತ್ : ಮುಂಬೈನಿಂದ ಹೊರಟಿದ್ದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಸಿಲುಕಿ 54 ವರ್ಷದ ಮಹಿಳೆಯೊಬ್ಬರು ಗುಜರಾತ್ ನ ಆನಂದ್ ರೈಲ್ವೆ ನಿಲ್ದಾಣದ ಬಳಿ ಮಂಗಳವಾರ ಮೃತಪಟ್ಟಿದ್ದಾರೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.

- Advertisement -

ಬಿಯಾಟ್ರಿಸ್ ಆರ್ಚಿಬಾಲ್ಡ್ ಪೀಟರ್ ಎಂದು ಗುರುತಿಸಲಾಗಿದ್ದು, ಸಂಜೆ 4.37 ಕ್ಕೆ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 30 ರಂದು ರೈಲು ಉದ್ಘಾಟಿಸಿ ಹಸಿರು ನಿಶಾನೆ ತೋರಿಸಿದ್ದರು. ಕಳೆದ ಒಂದು ತಿಂಗಳಲ್ಲಿ ರೈಲು ಡಿಕ್ಕಿ ಹೊಡೆದ ಕನಿಷ್ಠ ಮೂರು ಘಟನೆಗಳು ನಡೆದಿದ್ದು ಜಾನುವಾರುಗಳು ಸಾವನ್ನಪ್ಪಿದೆ. ವಾತ್ವಾ ಮತ್ತು ಮಣಿನಗರ ರೈಲು ನಿಲ್ದಾಣಗಳ ನಡುವೆ ನಾಲ್ಕು ಎಮ್ಮೆಗಳ ಹಿಂಡಿಗೆ ಡಿಕ್ಕಿ ಹೊಡೆದು ರೈಲಿನ ಮುಂಭಾಗದ ಪ್ಯಾನೆಲ್ ಗೆ ಹಾನಿಯಾಗಿತ್ತು.

Join Whatsapp