ದೇವಸ್ತೂರು | ಅಣ್ಣನ ಮಗನ ಮೇಲೆ ಗುಂಡು ಹಾರಾಟ : ಆರೋಪಿ ಬಂಧನ

Prasthutha|

ದೇವಸ್ತೂರು: ಅಣ್ಣನ ಮಗನ ಮೇಲೆ ಗುಂಡು ಹಾರಿಸಿದ ಘಟನೆ ಮಡಿಕೇರಿ ತಾಲ್ಲೂಕಿನ ದೇವಸ್ತೂರು ಗ್ರಾಮದಲ್ಲಿ ನಡೆದಿದೆ. ಗಾಯಗೊಂಡ ಯುವಕನನ್ನು ಸುಜಿತ್ (28) ಎಂದು ಗುರುತಿಸಲಾಗಿದೆ. ಕೌಟುಂಬಿಕ ಕಲಹ ಉಂಟಾದ ಹಿನ್ನೆಲೆ ಗುಂಡಿನ ದಾಳಿ ನಡೆದು ಯುವಕನೊಬ್ಬನ ಬೆನ್ನಿಗೆ ಗುಂಡೇಟು ತಗುಲಿ ಗಂಭೀರವಾಗಿ ಗಾಯಗೊಂಡಿದ್ದು ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

ಆರೋಪಿ ಭೀಮಯ್ಯ ಎಂಬಾತನನ್ನು ಮಡಿಕೇರಿ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಆರಂಭಿಸಿದ್ದಾರೆ.

Join Whatsapp