Home ಟಾಪ್ ಸುದ್ದಿಗಳು ಬೆಳಗಾವಿ: ಶ್ರೀರಾಮ ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಸೇರಿ ಇಬ್ಬರ ಮೇಲೆ ಗುಂಡಿನ ದಾಳಿ

ಬೆಳಗಾವಿ: ಶ್ರೀರಾಮ ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಸೇರಿ ಇಬ್ಬರ ಮೇಲೆ ಗುಂಡಿನ ದಾಳಿ

ಬೆಳಗಾವಿ: ವಿರಾಟ್‌ ಹಿಂದೂ ಸಮಾವೇಶದ ಸಿದ್ಧತೆಯಲ್ಲಿ ತೊಡಗಿದ್ದ ಶ್ರೀರಾಮ ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಹಾಗೂ ಮುಖಂಡನ ಮೇಲೆ ಗುಂಡಿನ ದಾಳಿ ನಡೆದ ಘಟನೆ ಬೆಳಗಾವಿ ಸಮೀಪದ ಹಿಂಡಲಗಾ ಗ್ರಾಮದ ಮರಾಠಿ ಸರ್ಕಾರಿ ಶಾಲೆಯ ಬಳಿ ನಡೆದಿದೆ.

ಗುಂಡೇಟಿಗೆ ಗಾಯಗೊಂಡವರನ್ನು ಶ್ರೀರಾಮ ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ರವಿ ಕೋಕಿತ್ಕರ್‌ ಹಾಗೂ ಹಿಂದೂ ರಾಷ್ಟ್ರ ಸೇನಾ ಮುಖಂಡ ಮನೋಜ್ ದೇಸೂರಕರ್‌ ಎಂದು ಗುರುತಿಸಲಾಗಿದೆ.

ರವಿ ಅವರ ಕುತ್ತಿಗೆ ಭಾಗಕ್ಕೆ ಮತ್ತು ಮನೋಜ್‌ ಅವರ ಕೈಗೆ ಗಾಯಗಳಾಗಿದ್ದು, ಇಬ್ಬರೂ ಇಲ್ಲಿನ ಕೆಎಲ್‌ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಗರದಲ್ಲಿ ಜನವರಿ 8ರಂದು ಶ್ರೀರಾಮ ಸೇನೆಯ ವತಿಯಿಂದ ವಿರಾಟ್‌ ಹಿಂದೂ ಸಮಾವೇಶ ಆಯೋಜಿಸಲಾಗಿದ್ದು, ಇದರ ಸಿದ್ಧತೆ ಕಾರ್ಯ ನಡೆಯುತ್ತಿತ್ತು. ಇದರ ನೇತೃತ್ವ ವಹಿಸಿದ್ದ ರವಿ ಹಾಗೂ ಮನೋಜ್‌ ಶನಿವಾರ ರಾತ್ರಿ 8ರ ಸುಮಾರಿಗೆ ಕಾರಿನಲ್ಲಿ ಸ್ಥಳಕ್ಕೆ ಹೊರಟಿದ್ದಾಗ ಇಬ್ಬರು ಅಪರಿಚಿತ ವ್ಯಕ್ತಿಗಳು ಏಕಾಏಕಿ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ.

ಈ ಸಂಬಂಧ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp
Exit mobile version