Home ಟಾಪ್ ಸುದ್ದಿಗಳು ಗಾಂಧೀಜಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಕಾಳಿಚರಣ್ ಬಂಧನ ವಿರೋಧಿಸಿ ಸಂಘಪರಿವಾರದಿಂದ ಪ್ರತಿಭಟನೆ

ಗಾಂಧೀಜಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಕಾಳಿಚರಣ್ ಬಂಧನ ವಿರೋಧಿಸಿ ಸಂಘಪರಿವಾರದಿಂದ ಪ್ರತಿಭಟನೆ

ನವದೆಹಲಿ: ಮಹಾತ್ಮ ಗಾಂಧಿಯವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಛತ್ತೀಸ್ ಗಢ ಪೊಲೀಸರಿಂದ ಬಂಧಿಸಲ್ಪಟ್ಟ ಹಿಂದುತ್ವ ನಾಯಕ ಕಾಳಿಚರಣ್ ಮಹಾರಾಜ್ ಎಂಬಾತನ ಬಂಧನವನ್ನು ವಿರೋಧಿಸಿ ಸಂಘಪರಿವಾರದ ಕಾರ್ಯಕರ್ತರು ಗುರ್ಗಾಂವ್ ನಲ್ಲಿ ಪ್ರತಿಭಟನೆ ನಡೆಸಿದರು.

ನಾಥೂರಾಂ ಗೋಡ್ಸೆ ಅಮರ್ ರಹೇ ಎಂಬ ಘೋಷಣೆ ಕೂಗಿದ ಕಾರ್ಯಕರ್ತರು, ಕೂಡಲೇ ಕಾಳಿಚರಣ್ ಅವರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದಾರೆ.

ಸಂಘಪರಿವಾರದ ಇದೇ ಗುಂಪು ಗುರ್ಗಾಂವ್ ನಲ್ಲಿ ಶುಕ್ರವಾರದ ನಮಾಝ್ ಗೆ ಅಡ್ಡಿಪಡಿಸಿ ಪ್ರತಿಭಟನೆ ನಡೆಸಿದೆ.

ಮಹಾತ್ಮ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಮಧ್ಯಪ್ರದೇಶದ ಕಾಳಿಚರಣ್ ಎಂಬಾತನನ್ನು ಗುರುವಾರ ಛತ್ತೀಸ್ ಗಢ ಪೊಲೀಸರು ಬಂಧಿಸಿದ್ದರು ಮತ್ತು ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಯಿತು.

Join Whatsapp
Exit mobile version