Home ಟಾಪ್ ಸುದ್ದಿಗಳು ಮಸೀದಿಗೆ ಬೆಂಕಿ ಹಚ್ಚಿ ಧರ್ಮಗುರು ಹತ್ಯೆಗೈದ ದುಷ್ಕರ್ಮಿಗಳು

ಮಸೀದಿಗೆ ಬೆಂಕಿ ಹಚ್ಚಿ ಧರ್ಮಗುರು ಹತ್ಯೆಗೈದ ದುಷ್ಕರ್ಮಿಗಳು

ಗುರುಗ್ರಾಮ್: ಗುರುಗ್ರಾಮ್ ನ ಮಸೀದಿಯೊಂದರ ಮೇಲೆ ದಾಳಿ ನಡೆಸಿದ ದುಷ್ಕರ್ಮಿಗಳು ಬೆಂಕಿ ಹಚ್ಚಿ ದರ್ಮಗುರುಗಳನ್ನು ಹತ್ಯೆಗೈದ ದಾರುಣ ಘಟನೆ ವರದಿಯಾಗಿದೆ.

ಈ ಘಟನೆಯಲ್ಲಿ ಹಲವಾರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೆಕ್ಟರ್ 57ರಲ್ಲಿರುವ ಅಂಜುಮನ್ ಜುಮಾ ಮಸೀದಿಗೂ ಬೆಂಕಿ ಹಚ್ಚಲಾಗಿದ್ದು, ಅಗ್ನಿಶಾಮಕ ನಿಯಂತ್ರಣ ವಾಹನಗಳು ಸ್ಥಳಕ್ಕೆ ಧಾವಿಸಿ, ಬೆಂಕಿಯನ್ನು ಹತೋಟಿಗೆ ತಂದಿವೆ.

ಕೇಂದ್ರ ಸಚಿವ ಹಾಗೂ ಗುರುಗ್ರಾಮ್ ಸಂಸದ ರಾವ್ ಇಂದರ್ ಜಿತ್ ಸಿಂಗ್ ಅವರು ಗುರುಗ್ರಾಮ್ ನ ಮಸೀದಿಯೊಂದರ ಮೇಲೆ ದಾಳಿ ನಡೆಸಲಾಗಿದ್ದು, ಇಮಾಮ್ ಸೇರಿದಂತೆ ಇಬ್ಬರಿಗೆ ಗುಂಡು ಹಾರಿಸಲಾಗಿದೆ NDTVಗೆ ಖಚಿತಪಡಿಸಿದ್ದಾರೆ.

Join Whatsapp
Exit mobile version