ಬಿಪಿನ್ ರಾವತ್ ಸಾವಿನ ನೆಪ: ಗುರ್ಗಾಂವ್ ನಲ್ಲಿ ನಮಾಝ್ ಗೆ ಮತ್ತೆ ಸಂಘಪರಿವಾರದಿಂದ ಅಡ್ಡಿ

Prasthutha|

ನವದೆಹಲಿ: ರಕ್ಷಣಾ ಮುಖ್ಯಸ್ಥ ಬಿಪಿನ್ ರಾವತ್ ಸಾವಿನ ಶೋಕಾಚರಣೆಯ ನೆಪದಲ್ಲಿ ಗುರ್ಗಾಂವ್ ನಲ್ಲಿ ಸ್ಥಳೀಯರು ಮತ್ತು ಸಂಘಪರಿವಾರದ ಕಾರ್ಯಕರ್ತರು ವಾಹನಗಳನ್ನು ಅಡ್ಡಗಟ್ಟುವ ಮೂಲಕ ಮತ್ತೆ ನಮಾಝ್ ಗೆ ಅಡ್ಡಿಪಡಿಸಿದರು.

- Advertisement -

ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ರಕ್ಷಣಾ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಇತರ ಸಿಬ್ಬಂದಿಗಳ ನಿಧನಕ್ಕೆ ಸಂತಾಪ ಸೂಚನೆಯ ನೆಪದಲ್ಲಿ ತಮ್ಮ ವಾಹನಗಳನ್ನು ಅಡ್ಡಗಟ್ಟಿ ಸಂಘಪರಿವಾರದ ಕಾರ್ಯಕರ್ತರು ಶುಕ್ರವಾರದ ನಮಾಝ್ ಗೆ ಅಡ್ಡಿಪಡಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಗುರ್ಗಾಂವ್ ನ ಸೆಕ್ಟರ್ 37 ರಲ್ಲಿ ಸಂಘಪರಿವಾರದ ಕಾರ್ಯಕರ್ತರು ಜೈ ಶ್ರೀರಾಮ್ ಮತ್ತು ಮುಸ್ಲಿಮ್ ವಿರೋಧಿ ಘೋಷಣೆ ಕೂಗುತ್ತಾ ನಮಾಝ್ ನಿರ್ವಹಿಸದಂತೆ ತಡೆವೊಡ್ಡುತ್ತಿರುವುದು ವೀಡಿಯೋದಲ್ಲಿ ಸೆರೆಯಾಗಿದೆ.

- Advertisement -

ಕಳೆದ ಸುಮಾರು 3 ತಿಂಗಳುಗಳಿಂದ ಸಂಘಪರಿವಾರದ ಕಾರ್ಯಕರ್ತರು ಶುಕ್ರವಾರದ ನಮಾಝ್ ಗೆ ನಿರಂತರ ಅಡ್ಡಿಪಡಿಸುತ್ತಲೇ ಬಂದಿದ್ದು, ಈ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಎಡವಿದೆ ಎಂದು ಸಾರ್ವಜನಿಕರು ದೂರಿದ್ದಾರೆ.

ಈ ಹಿಂದೆ ನಮಾಝ್ ನಿರ್ವಹಿಸುವ ಸ್ಥಳದಲ್ಲಿ ಸಂಯುಕ್ತ ಹಿಂದೂ ಸಂಘರ್ಷ ಸಮಿತಿ ವತಿಯಿಂದ ಪೂಜೆಯನ್ನು ಹಮ್ಮಿಕೊಂಡಿತ್ತು. ಈ ಪೂಜಾ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕ ಕಪಿಲ್ ಮಿಶ್ರಾ ಕೂಡ ಭಾಗವಹಿಸಿದ್ದರು.

Join Whatsapp