Home ಟಾಪ್ ಸುದ್ದಿಗಳು ಸರ್ಕಾರಿ ಶಾಲೆಗಳೆಂದರೆ ಒಂದು ಕಾಲದಲ್ಲಿ ತಿರಸ್ಕಾರ ಭಾವವಿತ್ತು, ಇದೀಗ ಪುರಸ್ಕಾರ ಬಂದಿದೆ: ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳೆಂದರೆ ಒಂದು ಕಾಲದಲ್ಲಿ ತಿರಸ್ಕಾರ ಭಾವವಿತ್ತು, ಇದೀಗ ಪುರಸ್ಕಾರ ಬಂದಿದೆ: ಮಧು ಬಂಗಾರಪ್ಪ

ಶಿವಮೊಗ್ಗ: ಸರ್ಕಾರಿ ಶಾಲೆಗಳೆಂದರೆ ಒಂದು ಕಾಲದಲ್ಲಿ ತಿರಸ್ಕಾರ ಭಾವವಿತ್ತು. ಈಗ ಅದಕ್ಕೆ ಪುರಸ್ಕಾರ ಬಂದಿದೆ. ಈ ಬಾರಿಯ ಎಸ್.ಎಸ್.ಎಲ್.ಸಿ. ಫಲಿತಾಂಶದಲ್ಲಿ ನಮ್ಮ ಜಿಲ್ಲೆ ಮೂರನೇ ಸ್ಥಾನದಲ್ಲಿರುವುದೇ ಇದಕ್ಕೆ ಸಾಕ್ಷಿಯಾಗಿದೆ. ಸರ್ಕಾರಿ ಶಾಲೆಗಳು ಮತ್ತೆ ವಿಜೃಂಭಿಸಲಿವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

‘ನಮ್ಮೂರ ಹೆಮ್ಮೆ’ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪಿಯುಸಿಯಲ್ಲಿಯೂ ಕೂಡ ಜಿಲ್ಲೆ ಉತ್ತಮ ಸಾಧನೆ ಮಾಡಿದೆ.

ಸರ್ಕಾರಿ ಶಾಲೆಯ ಮಕ್ಕಳು ರ‍್ಯಾಂಕ್ ಪಡೆಯುತ್ತಿರುವುದು ಗುಣಮಟ್ಟದ ಸೂಚನೆಯಾಗಿದೆ. ಇದಕ್ಕೆ ಶಿಕ್ಷಕರು, ಪೋಷಕರು ಕಾರಣರಾಗಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಕರಿದ್ದಾರೆ. ಇದು ನಮ್ಮೂರ ಹೆಮ್ಮೆ ಎಂದರು

Join Whatsapp
Exit mobile version