Home ಟಾಪ್ ಸುದ್ದಿಗಳು ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆ ಆರೋಪ: ಮೇ 26ಕ್ಕೆ ವಿಚಾರಣೆ ಮುಂದೂಡಿದ ವಾರಣಾಸಿ ನ್ಯಾಯಾಲಯ

ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆ ಆರೋಪ: ಮೇ 26ಕ್ಕೆ ವಿಚಾರಣೆ ಮುಂದೂಡಿದ ವಾರಣಾಸಿ ನ್ಯಾಯಾಲಯ

ವಾರಣಾಸಿ: ಐತಿಹಾಸಿಕ ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾಗಿದೆ ಎಂಬ ಆರೋಪವನ್ನು ಪ್ರಶ್ನಿಸಿ ಅಂಜುಮನ್ ಇಸ್ಲಾಮಿಯಾ ಸಮಿತಿ ಸೇರಿದಂತೆ ಮುಸ್ಲಿಮ್ ಸಂಘಟನೆಗಳು ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಿದ ವಾರಣಾಸಿ ನ್ಯಾಯಾಲಯ ಮೇ 26ಕ್ಕೆ ವಿಚಾರಣೆ ನಡೆಸಲು ಇಂದು ನಿರ್ಧರಿಸಿದೆ.

ಆಯೋಗದ ವರದಿಗೆ ಆಕ್ಷೇಪಣೆ ಸಲ್ಲಿಸಲು ನ್ಯಾಯಾಲಯ ಎರಡೂ ಕಡೆಯಿಂದ 7 ದಿನಗಳ ಒಳಗೆ ಅರ್ಜಿ ಆಹ್ವಾನಿಸಿದೆ.

ಸೋಮವಾರ ನಡೆದ ವಿಚಾರಣೆಯ ವೇಳೆ ಆದೇಶ ಸಂಖ್ಯೆ 7 ನಿಯಮ 11 CPC ಅನ್ವಯ ಈ ಅರ್ಜಿಯನ್ನು ಪರಿಗಣಿಸಬೇಕೋ ಅಥವಾ ಬೇಡವೋ ಎಂಬ ತೀರ್ಪನ್ನು ನ್ಯಾಯಾಲಯ ಕಾಯ್ದಿರಿಸಿತ್ತು.

Join Whatsapp
Exit mobile version