ಕೇಂದ್ರ ಬಜೆಟ್ ಮಂಡನೆಗೂ ಮುನ್ನ ತಯಾರಿಸುತ್ತಿದ್ದ ಹಲ್ವಾ ಕಾರ್ಯಕ್ರಮ ಈ ಬಾರಿ ರದ್ದು!

Prasthutha|

ನವದೆಹಲಿ : ಕೋವಿಡ್-19 ಹಿನ್ನೆಲೆಯಲ್ಲಿ ಕೇಂದ್ರ ಬಜೆಟ್ ಗೂ ಮುನ್ನ ನಡೆಯುವ ಹಲ್ವಾ ಕಾರ್ಯಕ್ರಮಕ್ಕೆ ಈ ಬಾರಿ ಬ್ರೇಕ್ ಬಿದ್ದಿದೆ.

- Advertisement -

2022-23ನೇ ಹಣಕಾಸು ವರ್ಷಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1, 2022ರಂದು ಬಜೆಟ್ ಮಂಡಿಸಲಿದ್ದಾರೆ. ಬಜೆಟ್ ಗೆ ಮುಂಚೆ ‘ಹಲ್ವಾ ಕಾರ್ಯಕ್ರಮ’ ನಡೆಸುವುದು ಪದ್ದತಿಯಾಗಿತ್ತು. ಆದರೆ ಕೋವಿಡ್ ಸೋಂಕಿನ ಹಿನ್ನೆಲೆ ಈ ಬಾರಿ ಹಲ್ವಾ ಕಾರ್ಯಕ್ರಮವನ್ನು ಸ್ಥಗಿತಗೊಳಿಸಲಾಗಿದೆ.

ಕೇಂದ್ರ ಹಣಕಾಸು ಸಚಿವರು ಹಲ್ವಾ ಮಾಡುವ ಮೂಲಕ ಈ ಹಲ್ವಾ ಕಾರ್ಯಕ್ರಮ ಸಂಭ್ರಮಾಚರಣೆ ಆರಂಭಿಸುತ್ತಾರೆ. ನಂತರ ಸಹೋದ್ಯೋಗಿಗಳಿಗೆ ಹಂಚಲಾಗುತ್ತದೆ. ರಾಜ್ಯ ಖಾತೆ ಸಚಿವರು ಮತ್ತು ಸಚಿವಾಲಯದ ಉನ್ನತ ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಾರೆ.

Join Whatsapp