ಶೇಖ್ ಹಸೀನಾರನ್ನು ಬಾಂಗ್ಲಾಕ್ಕೆ ಹಸ್ತಾಂತರಿಸಿ: ಖಾಲಿದಾ ಝಿಯಾ ಪಾರ್ಟಿ ಕರೆ

Prasthutha|

ಢಾಕಾ: ಭಾರತದಲ್ಲಿ ಆಶ್ರಯ ಪಡೆದಿರುವ ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರನ್ನು ಭಾರತ ಬಾಂಗ್ಲಾದೇಶಕ್ಕೆ ಹಸ್ತಾಂತರಿಸಬೇಕು ಎಂದು ಅಲ್ಲಿನ ಮಾಜಿ ಪಿಎಂ ಖಾಲಿದಾ ಝಿಯಾ ನೇತೃತ್ವದ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ಕರೆ ನೀಡಿದೆ.

- Advertisement -

ಶೇಖ್ ಹಸೀನಾ ಬಾಂಗ್ಲಾದೇಶದಲ್ಲಿ 2013ರಲ್ಲಿ ಸಾಮೂಹಿಕ ಹತ್ಯೆ ಸೇರಿದಂತೆ ಹಲವಾರು ಕ್ರಿಮಿನಲ್ ಆರೋಪಗಳನ್ನು ಎದುರಿಸುತ್ತಿದ್ದಾರೆ ಎಂದು ಅದು ಹೇಳಿದೆ.

ನೀವು ಶೇಖ್ ಹಸೀನಾ ಅವರನ್ನು ಬಾಂಗ್ಲಾದೇಶ ಸರ್ಕಾರಕ್ಕೆ ಕಾನೂನು ರೀತಿಯಲ್ಲಿ ಹಸ್ತಾಂತರಿಸಬೇಕು ಎಂಬುದು ನಮ್ಮ ಒತ್ತಾಯವಾಗಿದೆ. ಈ ದೇಶದ ಜನರು ಅವರ ವಿಚಾರಣೆಗೆ ಕಾದಿದ್ದಾರೆ. ಆಕೆ ಆ ವಿಚಾರಣೆಯನ್ನು ಎದುರಿಸಲಿ ಎಂದು BNP ಪ್ರಧಾನ ಕಾರ್ಯದರ್ಶಿ ಮಿರ್ಜಾ ಫಕ್ರುಲ್ ಹೇಳಿದ್ದಾರೆ.

- Advertisement -

ಶೇಖ್ ಹಸೀನಾಗೆ ಆಶ್ರಯ ನೀಡುವ ಮೂಲಕ ಭಾರತವು ಪ್ರಜಾಪ್ರಭುತ್ವದ ಬಗ್ಗೆ ತನ್ನ ಬದ್ಧತೆಯನ್ನು ತೋರುತ್ತಿಲ್ಲ ಎಂದು ಅವರು ಟೀಕಿಸಿದ್ದಾರೆ.



Join Whatsapp