ಹರಿದ್ವಾರ | ಪ್ರವಾದಿ ಮುಹಮ್ಮದ್, ಮಹಾತ್ಮ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ನರಸಿಂಹಾನಂದ

Prasthutha|

ಹರಿದ್ವಾರ: ಸದಾ ವಿವಾದಾತ್ಮಕ ಹೇಳಿಕೆಗಳಿಗೆ ಕುಖ್ಯಾತಿ ಪಡೆದಿರುವ ಸಂಘಪರಿವಾರದ ಮುಖಂಡ ನರಸಿಂಹಾನಂದ ಮತ್ತೊಮ್ಮೆ ತಮ್ಮ ನಾಲಗೆಯನ್ನು ಹರಿಯಬಿಟ್ಟಿದ್ದಾನೆ. ಈ ಬಾರಿ ಪ್ರವಾದಿ ಮುಹಮ್ಮದ್ ಮತ್ತು ಮಹಾತ್ಮ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಘಟನೆ ಹರಿದ್ವಾರದಿಂದ ವರದಿಯಾಗಿದ್ದು, ಈ ಕುರಿತ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

- Advertisement -

ಪ್ರವಾದಿ ಮುಹಮ್ಮದ್ ಮತ್ತು ಮಹಾತ್ಮ ಗಾಂಧಿ ಅವರನ್ನು ವಿರೋಧಿಸಿ ಮಾತನಾಡಿದ ನರಸಿಂಹಾನಂದ, ಈ ಇಬ್ಬರು ವ್ಯಕ್ತಿಗಳ ಕುರಿತ ವಾಸ್ತವಾಂಶವನ್ನು ಜನತೆಯ ಎದುರು ಬಹಿರಂಗಪಡಿಸಲು ಸುಪ್ರೀಮ್ ಕೋರ್ಟ್’ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸುವಂತಾಗಲು ಒಂದು ಲಕ್ಷ ಹಿಂದೂಗಳಿಂದ ಸಹಿ ಸಂಗ್ರಹ ಅಭಿಯಾನವನ್ನು ನಡೆಸಲಾಗುವುದು ಎಂದು ತಿಳಿಸಿದರು.

ಈ ಹಿಂದೆಯೂ ಕೂಡ ಗಾಂಧಿ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ ನರಸಿಂಹಾನಂದನ ವಿರುದ್ಧ ಪ್ರಕರಣ ದಾಖಲಾಗಿದ್ದು, ಇದೀಗ ಮತ್ತೆ ಪ್ರವಾದಿ ಮತ್ತು ಗಾಂಧೀಜಿ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದಾನೆ.

Join Whatsapp