ಹರೀಶ್ ಪೂಂಜಾ ತನ್ನ ಚೇಲಾಗಳಿಗೆ ಕೇಸರಿ ಶಾಲು ಹಾಕಿಸಿ ಗೋವುಗಳನ್ನು ಕಸಾಯಿಖಾನೆಗೆ ಸಾಗಾಟ ಮಾಡುತ್ತಿದ್ದಾರೆ: ತಿಮರೋಡಿ ಕಿಡಿ

Prasthutha|

►‘ಪೂಂಜಾ ವಿರುದ್ಧ ಸುಮೋಟೋ ಕೇಸ್ ದಾಖಲಿಸಲಿ ಇಲ್ಲವಾದರೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿ’

- Advertisement -


ಬೆಳ್ತಂಗಡಿ: ಶಾಸಕ ಹರೀಶ್ ಪೂಂಜಾ ತನ್ನ ಚೇಲಾಗಳಿಗೆ ಕೇಸರಿ ಶಾಲು ಹಾಕಿಸಿ ಗೋವುಗಳನ್ನು ಇಂದು ಕಸಾಯಿಖಾನೆಗೆ ತಲುಪಿಸುವ ಕೆಲಸ ಮಾಡಿಸುತ್ತಿದ್ದಾರೆ ಎಂದು ಹಿಂದೂ ಜಾಗರಣ ವೇದಿಕೆ ಸಂಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ ವಾಗ್ದಾಳಿ ನಡೆಸಿದ್ದಾರೆ.


ಈ ಬಗ್ಗೆ ಬೆಳ್ತಂಗಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದುತ್ವದ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಹರೀಶ್ ಪೂಂಜಾ ಹಿಂದೂ ಸಮಾಜಕ್ಕೆ ಧಕ್ಕೆ ತರುವ ಕೆಲಸ ಮಾಡುತ್ತಿದ್ದು, ವೋಟು ಖರೀದಿ ಮಾಡಿ ಆಗಿರುವ ಜನನಾಯಕ. ತನ್ನ ಹುಡುಗರಿಗೆ ಕೇಸರಿ ಶಾಲು ಹಾಕಿಸಿ ಗೋವುಗಳನ್ನು ಇಂದು ಕಸಾಯಿಖಾನೆಗೆ ತಲುಪಿಸುವ ಕೆಲಸ ಮಾಡಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

- Advertisement -


ಇನ್ನು ಹರೀಶ್ ಪೂಂಜಾ ಅವರು ಬೆಳ್ತಂಗಡಿ ಶಾಸಕರಾಗಿ ಅಧಿಕಾರ ಸ್ವೀಕರಿಸಿದ ನಂತರ ತಾಲೂಕಿನಲ್ಲಿ ಮತಾಂತರ, ಗೋಹತ್ಯೆ ಪ್ರಕರಣಗಳು ನಿರಂತರವಾಗಿ ನಡೆಯುತ್ತಿದ್ದು, ಅವರ ಕಚೇರಿಯಿಂದಲೇ ಬಿಜೆಪಿ ಮುಖಂಡ ಮಂಡಿ ಗಣೇಶ್ ದನ ಸಾಗಾಟದಲ್ಲಿ ತೊಡಗಿದ್ದಾರೆ. ಜೊತೆಗೆ ಪೂಂಜಾ ಅವರು ಜಾತಿ ಆಧಾರದ ಮೇಲೆ ತಾಲೂಕನ್ನು ವಿಭಜಿಸಿ ಒಡೆದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


“ಸಿದ್ದರಾಮಯ್ಯ 24 ಹಿಂದೂ ಕಾರ್ಯಕರ್ತ ಹತ್ಯೆ ಮಾಡಿದ್ದಾರೆ ಎಂದ ಶಾಸಕ ಹರೀಶ್ ಪೂಂಜಾ ವಿರುದ್ದ ಪೊಲೀಸರು ಸುಮೋಟೋ ಕೇಸ್ ದಾಖಲಿಸಲಿ ಇಲ್ಲವಾದರೆ ಈ ಆರೋಪ ಒಪ್ಪಿಕೊಂಡು ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಲಿ. ಶಾಸಕನಾಗಿ ಎಲ್ಲರನ್ನು ಸಮಾನವಾಗಿ ಕೊಂಡೊಯ್ಯುವೆಡೆಗೆ ನಿಮ್ಮ ನಡೆ ಇರಲಿ, ಅದು ಬಿಟ್ಟು ಕೇಸರಿ ಶಾಲು ಹೆಗಲಿಗೇರಿಸಿ ಸುಳ್ಳು ಹೇಳಿಕೆ ನೀಡಿ ನೀವ್ಯಾಕೆ ಸಮಾಜವನ್ನು ಒಡೆಯುವ ಕೆಲಸಕ್ಕೆ ಕೈ ಹಾಕಿದ್ದೀರಿ” ಎಂದು ಪ್ರಶ್ನಿಸಿದ್ದಾರೆ.

Join Whatsapp