ಹತ್ಯೆಯಾದ ಬಜರಂಗದಳ ಮುಖಂಡ ಹರ್ಷ, ನಾಲ್ಕು ಕ್ರಿಮಿನಲ್ ಪ್ರಕರಣಗಳ ಆರೋಪಿ !

Prasthutha|

ತೀರ್ಥಹಳ್ಳಿ: ಮೃತ ಹರ್ಷ ಬಜರಂಗದಳ, ವಿಶ್ವ ಹಿಂದೂ ಪರಿಷತ್ ಸಂಘಟನೆಗಳಲ್ಲಿ ಸಕ್ರಿಯವಾಗಿದ್ದು, ಈ ಹಿಂದೆ ಈತನ ವಿರುದ್ಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ನಾಲ್ಕು ಪ್ರಕರಣ ದಾಖಲಾಗಿದ್ದವು.

- Advertisement -

ಅನ್ಯ ಸಮುದಾಯದ ಯುವಕರ ಜತೆ ತಗಾದೆ, ಕೋಮು ಭಾವನೆ ಕೆರಳಿಸುವ ಪೋಸ್ಟರ್ ಅಳವಡಿಕೆ, ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾತ್ಮಕ ಪೋಸ್ಟ್ ವೈರಲ್ ಮಾಡಿದ ಆರೋಪದಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಮೃತ ಹರ್ಷ ಶಿವಮೊಗ್ಗದ ಇಂಜಿನಿಯರೊಬ್ಬರ ಬಳಿ ಸಹಾಯಕನಾಗಿ ಕಾರ್ಯನಿರ್ವಹಿಸುತ್ತಿದ್ದು, ಹಿಂದುತ್ವ, ಗೋ ರಕ್ಷಣೆಯಂತಹ ವಿಚಾರವನ್ನು ಮುಂದಿಟ್ಟುಕೊಂಡು ಸಾರ್ವಜನಿಕವಾಗಿ ಶಾಂತಿ ಕದಡುವ ಯತ್ನ, ಘರ್ಷಣೆ, ಕೊಲೆಯತ್ನ ಸೇರಿದಂತೆ ಹಲವು ಕ್ರಿಮಿನಲ್ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.



Join Whatsapp