ಹರ್ಷ ಹತ್ಯೆ ಪ್ರಕರಣ: ಸಹಜ ಸ್ಥಿತಿಯತ್ತ ಶಿವಮೊಗ್ಗ

Prasthutha|

ಶಿವಮೊಗ್ಗ: ಬಜರಂಗ ದಳದ ಕಾರ್ಯಕರ್ತ ಹರ್ಷ ಹತ್ಯೆಯ ನಂತರ ಉದ್ವಿಗ್ನಗೊಂಡಿದ್ದ ಶಿವಮೊಗ್ಗ ನಗರ ಸಹಜ ಸ್ಥಿತಿಗೆ ಮರಳುತ್ತಿದೆ.

- Advertisement -

ಎಂದಿನಂತೆ ಮಾರುಕಟ್ಟೆಗಳು, ಸರ್ಕಾರಿ ಕಚೇರಿಗಳು ತೆರೆದಿವೆ. ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಬಂದೋಬಸ್ತ್ ಕಾರ್ಯಕ್ಕೆ 4 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ. ಹರ್ಷ ಕುಟುಂಬ ವಾಸವಿರುವ ಸೀಗೆಹಟ್ಟಿ ಸುತ್ತಲ ಪ್ರದೇಶಗಳಲ್ಲಿ ಹೆಚ್ಚುವರಿ ಪಡೆ ನಿಯೋಜಿಸಲಾಗಿದೆ.

- Advertisement -

ಹಳೇ ಶಿವಮೊಗ್ಗ ಭಾಗ ಹೊರತುಪಡಿಸಿ ಉಳಿದೆಡೆ ಜನಜೀವನ ಸಹಜ ಸ್ಥಿತಿಗೆ ಮರಳಿದೆ. ಸೋಮವಾರ ಪಾರ್ಥಿವ ಶರೀರದ ಮೆರವಣಿಗೆ ವೇಳೆ ನಡೆದ ಕಲ್ಲುತೂರಾಟ, ಹಲ್ಲೆ ಪ್ರಕರಣದಲ್ಲಿ ಗಾಯಗೊಂಡಿದ್ದ 20ಕ್ಕೂ ಜನರು ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾರೆ.

ಕರ್ಫ್ಯೂ ಇದ್ದರೂ ಜನರಿಗೆ ಅಗತ್ಯ ವಸ್ತುಗಳ ಖರೀದಿಗೆ ಪೊಲೀಸರು ಅವಕಾಶ ಕಲ್ಪಿಸಿದ್ದಾರೆ.



Join Whatsapp