Home ಟಾಪ್ ಸುದ್ದಿಗಳು ಹರ್ಯಾಣ: ವಿಶ್ವಾಸ ಮತ ಸಾಬೀತಿಗೆ ಆಗ್ರಹಿಸಿ ರಾಜ್ಯಪಾಲರಿಗೆ ದುಷ್ಯಂತ್ ಚೌಟಾಲ ಪತ್ರ

ಹರ್ಯಾಣ: ವಿಶ್ವಾಸ ಮತ ಸಾಬೀತಿಗೆ ಆಗ್ರಹಿಸಿ ರಾಜ್ಯಪಾಲರಿಗೆ ದುಷ್ಯಂತ್ ಚೌಟಾಲ ಪತ್ರ

ಹರ್ಯಾಣ: ಹರ್ಯಾಣ ಸರ್ಕಾರದ ಬೆಂಬಲ ಅಲ್ಪಮತಕ್ಕೆ ಕುಸಿದಿರುವ ಹಿನ್ನೆಲೆಯಲ್ಲಿ ಹರ್ಯಾಣದ ಮಾಜಿ ಉಪಮುಖ್ಯಮಂತ್ರಿ ಹಾಗೂ ಜೆಜೆಪಿ ನಾಯಕ ದುಷ್ಯಂತ್ ಚೌಟಾಲ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರಿಗೆ ಪತ್ರ ಬರೆದಿದ್ದು, ಸದನದಲ್ಲಿ ವಿಶ್ವಾಸಮತ ಸಾಬೀತುಪಡಿಸಲು ಸೂಚನೆ ನೀಡುವಂತೆ ಆಗ್ರಹಿಸಿದ್ದಾರೆ.

ಹರ್ಯಾಣದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಬೇಕು ನಂತರ ಚುನಾವಣೆ ನಡೆಸಬೇಕೆಂದು ಕಾಂಗ್ರೆಸ್ ಆಗ್ರಹಿಸಿದೆ.


ಹರ್ಯಾಣದ ಪ್ರಮುಖ ವಿಪಕ್ಷವಾಗಿರುವ ಕಾಂಗ್ರೆಸ್ ಜೆಜೆಪಿ, ಐಎನ್ ಎಲ್ ಡಿ ಹಾಗೂ ಪಕ್ಷೇತರ ಶಾಸಕ ಬಾಲರಾಜ್ ಕುಂಡು ಅವರಿಗೆ ಇದೇ ರೀತಿಯ ಪತ್ರಗಳನ್ನು ರಾಜ್ಯಪಾಲರಿಗೆ ಬರೆದು ಬಿಜೆಪಿಯನ್ನು ವಿರೋಧಿಸುವಂತೆ ಮನವಿ ಮಾಡಿದೆ.

Join Whatsapp
Exit mobile version