ಹರ್ಯಾಣ: ಕಾಂಗ್ರೆಸ್ ಅಭ್ಯರ್ಥಿ ಪರ ವೀರೇಂದ್ರ ಸೆಹ್ವಾಗ್ ಬ್ಯಾಟಿಂಗ್

Prasthutha|

ಹರ್ಯಾಣ: ಟೀಮ್ ಇಂಡಿಯಾದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ಹರ್ಯಾಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನಿರುದ್ಧ್ ಚೌಧರಿ ಪರ ಭರ್ಜರಿ ಪ್ರಚಾರ ನಡೆಸಿದ್ದಾರೆ.

- Advertisement -


ಬಹಿರಂಗ ಪ್ರಚಾರ ಸಭೆಯಲ್ಲಿ ಮಾತನಾಡಿದ ಸೆಹ್ವಾಗ್, ಅಕ್ಟೋಬರ್ 5 ರಂದು ಅನಿರುದ್ಧ್ ಚೌಧರಿಗೆ ಮತ ನೀಡುವಂತೆ ಮನವಿ ಮಾಡಿದ್ದಾರೆ.


ವೀರೇಂದ್ರ ಸೆಹ್ವಾಗ್ ಹಾಗೂ ಅನಿರುದ್ಧ್ ಚೌಧರಿ ತುಂಬಾ ಆಪ್ತರು. ಹೀಗಾಗಿಯೇ ಹರ್ಯಾಣದ ತೋಷಮ್ ಕ್ಷೇತ್ರದಿಂದ ಸ್ಪರ್ಧಿಸಿರುವ ಅನಿರುದ್ಧ್ ಚೌಧರಿ ಪರ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ.
ಈ ಬಗ್ಗೆ ಮಾತನಾಡಿದ ವೀರೇಂದ್ರ ಸೆಹ್ವಾಗ್, ಅನಿರುದ್ಧ್ ಚೌಧರಿ ಅವರು ನನಗೆ ಅಣ್ಣನ ಸಮಾನರು. ಅವರು ಸಾರ್ವಜನಿಕರಿಗೆ ನೀಡಿದ ಭರವಸೆಗಳನ್ನು ಈಡೇರಿಸುತ್ತಾರೆ ಎಂಬ ಸಂಪೂರ್ಣ ನಂಬಿಕೆ ಇದೆ. ಹೀಗಾಗಿ ಅನಿರುದ್ಧ್ ಚೌಧರಿ ಅವರನ್ನು ನೀವು ಗೆಲ್ಲಿಸಬೇಕೆಂದು ಮನವಿ ಮಾಡಿದರು.

- Advertisement -


ಅಲ್ಲದೆ ಅನಿರುದ್ಧ್ ಚೌಧರಿ ಚುನಾವಣೆಯಲ್ಲಿ ಗೆದ್ದರೆ ಖಂಡಿತವಾಗಿಯೂ ಅವರು ನಿಮ್ಮನ್ನು ನಿರಾಸೆಗೊಳಿಸುವುದಿಲ್ಲ. ಎಲ್ಲಾ ಬೇಡಿಕೆಗಳನ್ನು ಈಡೇರಿಸಲಿದ್ದಾರೆ ಎಂದು ವೀರೇಂದ್ರ ಸೆಹ್ವಾಗ್ ತೋಷಮ್ ಜನರಿಗೆ ಭರವಸೆ ನೀಡಿದರು.



Join Whatsapp