Home ರಾಷ್ಟ್ರೀಯ ಹರ್ಯಾಣ: ಕಾಂಗ್ರೆಸ್ ಅಭ್ಯರ್ಥಿ ಪರ ವೀರೇಂದ್ರ ಸೆಹ್ವಾಗ್ ಬ್ಯಾಟಿಂಗ್

ಹರ್ಯಾಣ: ಕಾಂಗ್ರೆಸ್ ಅಭ್ಯರ್ಥಿ ಪರ ವೀರೇಂದ್ರ ಸೆಹ್ವಾಗ್ ಬ್ಯಾಟಿಂಗ್

ಹರ್ಯಾಣ: ಟೀಮ್ ಇಂಡಿಯಾದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ಹರ್ಯಾಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನಿರುದ್ಧ್ ಚೌಧರಿ ಪರ ಭರ್ಜರಿ ಪ್ರಚಾರ ನಡೆಸಿದ್ದಾರೆ.


ಬಹಿರಂಗ ಪ್ರಚಾರ ಸಭೆಯಲ್ಲಿ ಮಾತನಾಡಿದ ಸೆಹ್ವಾಗ್, ಅಕ್ಟೋಬರ್ 5 ರಂದು ಅನಿರುದ್ಧ್ ಚೌಧರಿಗೆ ಮತ ನೀಡುವಂತೆ ಮನವಿ ಮಾಡಿದ್ದಾರೆ.


ವೀರೇಂದ್ರ ಸೆಹ್ವಾಗ್ ಹಾಗೂ ಅನಿರುದ್ಧ್ ಚೌಧರಿ ತುಂಬಾ ಆಪ್ತರು. ಹೀಗಾಗಿಯೇ ಹರ್ಯಾಣದ ತೋಷಮ್ ಕ್ಷೇತ್ರದಿಂದ ಸ್ಪರ್ಧಿಸಿರುವ ಅನಿರುದ್ಧ್ ಚೌಧರಿ ಪರ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ.
ಈ ಬಗ್ಗೆ ಮಾತನಾಡಿದ ವೀರೇಂದ್ರ ಸೆಹ್ವಾಗ್, ಅನಿರುದ್ಧ್ ಚೌಧರಿ ಅವರು ನನಗೆ ಅಣ್ಣನ ಸಮಾನರು. ಅವರು ಸಾರ್ವಜನಿಕರಿಗೆ ನೀಡಿದ ಭರವಸೆಗಳನ್ನು ಈಡೇರಿಸುತ್ತಾರೆ ಎಂಬ ಸಂಪೂರ್ಣ ನಂಬಿಕೆ ಇದೆ. ಹೀಗಾಗಿ ಅನಿರುದ್ಧ್ ಚೌಧರಿ ಅವರನ್ನು ನೀವು ಗೆಲ್ಲಿಸಬೇಕೆಂದು ಮನವಿ ಮಾಡಿದರು.


ಅಲ್ಲದೆ ಅನಿರುದ್ಧ್ ಚೌಧರಿ ಚುನಾವಣೆಯಲ್ಲಿ ಗೆದ್ದರೆ ಖಂಡಿತವಾಗಿಯೂ ಅವರು ನಿಮ್ಮನ್ನು ನಿರಾಸೆಗೊಳಿಸುವುದಿಲ್ಲ. ಎಲ್ಲಾ ಬೇಡಿಕೆಗಳನ್ನು ಈಡೇರಿಸಲಿದ್ದಾರೆ ಎಂದು ವೀರೇಂದ್ರ ಸೆಹ್ವಾಗ್ ತೋಷಮ್ ಜನರಿಗೆ ಭರವಸೆ ನೀಡಿದರು.

Join Whatsapp
Exit mobile version