ಹಾಸನ: ನ್ಯಾಯಾಲಯದ ಆವರಣದಲ್ಲೇ ಪತ್ನಿಯನ್ನು ಹತ್ಯೆಗೈದ ಪತಿ

Prasthutha|

ಹಾಸನ: ನ್ಯಾಯಾಲಯದ ಆವರಣದಲ್ಲೇ ಪಾಪಿ ಪತಿಯೊಬ್ಬ ತನ್ನ ಪತ್ನಿಯ ಕತ್ತು ಕೊಯ್ದು ಹತ್ಯೆಗೈದ ಘಟನೆ ಹೊಳೆನರಸೀಪುರ ಪಟ್ಟಣದ ಎರಡನೇ ಜೆಎಂಎಫ್‌ಸಿ ಕೋರ್ಟ್ ಆವರಣದಲ್ಲಿ ನಡೆದಿದೆ.

- Advertisement -

ತಟ್ಟೆಕೆರೆ ಗ್ರಾಮದ ನಿವಾಸಿ ಚೈತ್ರಾ ಮೃತ ಮಹಿಳೆ.  ಎರಡು ವರ್ಷದ ಹಿಂದೆ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿ, ಜೀವನಾಂಶ ಕೋರಿ ಹೊಳೆನರಸೀಪುರ  ಕೋರ್ಟ್ ಮೆಟ್ಟಿಲೇರಿದ್ದರು. ಅದರಂತೆ ವಿಚಾರಣೆಗೆ ಹಾಜರಾಗುವ ವೇಳೆ ಚೈತ್ರಾ ಪತಿ ಶಿವಕುಮಾರ್ ಆಕೆಯ ಕತ್ತು ಕೊಯ್ದು ಹತ್ಯೆ ಮಾಡಿದ್ದಾನೆ.

ಕತ್ತು ಕೊಯ್ದು ಎಸ್ಕೇಪ್ ಆಗಲು  ಯತ್ನಿಸುತ್ತಿದ್ದ ಆರೋಪಿ ಶಿವಕುಮಾರ್‌ನನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

- Advertisement -

ಚೈತ್ರ ಮತ್ತು ಶಿವಕುಮಾರ್ ನಡುವೆ ಕೌಟುಂಬಿಕ ಕಲಹ ಏರ್ಪಟ್ಟಿದ್ದ ಹಿನ್ನೆಲೆ ವಿಚ್ಛೇದನ ಮತ್ತುಜೀವನಾಂಶ ಕೋರಿ ಚೈತ್ರಾ ತನ್ನ ಪತಿಯ ವಿರುದ್ಧ ಹೊಳೆನರಸೀಪುರ ಟೌನ್ ಠಾಣೆ ಪೊಲೀಸ್ ವ್ಯಾಪ್ತಿಯಲ್ಲಿ ಇರುವ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ತನ್ನ ವಿರುದ್ಧವೇ ಕೋರ್ಟ್ ಗೆ  ಅರ್ಜಿ ಸಲ್ಲಿಸದ್ದಕ್ಕೆ ಶಿವಕುಮಾರ್ ಪತ್ನಿಯ ವಿರುದ್ಧ ಕೋಪಗೊಂಡಿದ್ದನು. ಇದನ್ನು ಲೆಕ್ಕಿಸದೆ ಇಂದು ಚೈತ್ರಾ ವಿಚಾರಣೆಗೆಂದು ನ್ಯಾಯಾಲಯಕ್ಕೆ ಹೋಗಿದ್ದಳು. ಈ ವೇಳೆ ಆಕೆಯ ಹತ್ಯೆಗೆ  ಕೋರ್ಟ್ ಆವರಣದಲ್ಲೇ ಹೊಂಚುಹಾಕಿ ಕುಳಿತಿದ್ದ ಶಿವಕುಮಾರ್ ಶೌಚಾಲಯಕ್ಕೆ ತೆರಳುತ್ತಿದ್ದ  ವೇಳೆ ಅಡ್ಡಗಟ್ಟಿ ಕತ್ತನ್ನು ಕೊಯ್ದಿದ್ದಾನೆ.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಚೈತ್ರಾಳನ್ನು ತಕ್ಷಣವೇ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ  ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಗೆ ದಾಖಲಾದ ಕೆಲವೇ ಕ್ಷಣಗಳಲ್ಲಿ ಚೈತ್ರಾ ಕೊನೆಯುಸಿರೆಳೆದಿದ್ದಾರೆ.

Join Whatsapp