ಹಾಸನ: ಪ್ಲೈವುಡ್ ತುಂಬಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಕ್ಲೀನರ್ ವೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚನ್ನರಾಯಪಟ್ಟಣ ತಾಲ್ಲೂಕಿನ ಚಿಕ್ಕೋನಹಳ್ಳಿ ಗೇಟ್ ಬಳಿ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ.
- Advertisement -
ಮೃತ ಯುವಕನನ್ನು ಮಂಗಳೂರಿನ ಬಣತಾಡಿ ಗ್ರಾಮದ ಉಮ್ಮರ್ ಸಲ್ಮಾನ್ ಫಾರಿಶ್ (18) ಎಂದು ಗುರುತಿಸಲಾಗಿದೆ.
ಪ್ಲೈವುಡ್ ತುಂಬಿದ್ದ ಲಾರಿ ವೇಗವಾಗಿ ಬರುತ್ತಿದ್ದಾಗ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾಗಿದೆ ಎನ್ನಲಾಗಿದೆ.
- Advertisement -
ಘಟನೆಯ ಬಗ್ಗೆ ಚನ್ನರಾಯಪಟ್ಟಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.