Home ಟಾಪ್ ಸುದ್ದಿಗಳು ಹಾಸನ| ಹಳೆ ದ್ವೇಷದ ಹಿನ್ನೆಲೆ; ಚಾಕುವಿನಿಂದ ಇರಿದು ಆಟೋ ಚಾಲಕನ ಕೊಲೆ

ಹಾಸನ| ಹಳೆ ದ್ವೇಷದ ಹಿನ್ನೆಲೆ; ಚಾಕುವಿನಿಂದ ಇರಿದು ಆಟೋ ಚಾಲಕನ ಕೊಲೆ

ಹಾಸನ: ಆಟೋ ಚಾಲಕನೊಬ್ಬನನ್ನುಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರದ ಹೊಸ ಬಸ್ ನಿಲ್ದಾಣದ ಹಿಂಭಾಗದಲ್ಲಿ ನಡೆದಿದೆ.

ಗಿರೀಶ್ (29)ಕೊಲೆಯಾದ  ವ್ಯಕ್ತಿ. ಬೆಳಗ್ಗಿನಿಂದ ಹಿಮತ್ ಸಿಂಗ್ ಕಾರ್ಖಾನೆಯಲ್ಲಿ ಕೆಲಸ ಮಾಡಿ, ಮಧ್ಯಾಹ್ನದ ನಂತರ ಆಟೋ ಚಾಲಕನಾಗಿ ಜೀವನ ಸಾಗಿಸುತ್ತಿದ್ದರು. ಹಳೆ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ.

ಆಟೋದಲ್ಲೇ ಗಿರೀಶ್ ಮೃತದೇಹ ಪತ್ತೆಯಾಗಿದ್ದು, ಸ್ಥಳಕ್ಕೆ  ಎಸ್ಪಿ ನಂದಿನಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp
Exit mobile version