ಉತ್ತರ ಪ್ರದೇಶ | ದ್ವೇಷ ಹರಡುತ್ತಿದ್ದ ಸಂಘಪರಿವಾರದ ಮುಖಂಡೆ ಮಧು ಕಿಶ್ವರ್, ಇತರ ನಾಲ್ವರ ವಿರುದ್ಧ ಪ್ರಕರಣ ದಾಖಲು

Prasthutha|

ಲಖನೌ: 2017 ರಲ್ಲಿ ನಡೆದ ಸೂಕ್ಷ್ಮ ಘಟನೆಯ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೋ ಪೋಸ್ಟ್ ಮಾಡುವ ಮೂಲಕ ಶಾಂತಿ ಕದಡಲು ಯತ್ನಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಂಘಪರಿವಾರದ ಮುಖಂಡೆ ಮಧು ಕಿಶ್ವರ್ ಮತ್ತು ಇತರೆ ನಾಲ್ವರ ವಿರುದ್ಧ ಉತ್ತರ ಪ್ರದೇಶದಲ್ಲಿ ಸಹರಾನ್’ಪುರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

- Advertisement -

ಸಾಮಾಜಿಕ ಮಾಧ್ಯಮಗಳಲ್ಲಿ ದ್ವೇಷ ಹರಡುತ್ತಿದ್ದ ಘಟನೆಗೆ ಸಂಬಂಧಿಸಿದಂತೆ ಐವರು ಸಂಘಪರಿವಾರದ ಮುಖಂಡರ ವಿರುದ್ಧ ಐಪಿಸಿ ಸೆಕ್ಷನ್ 505 (2), ಐಟಿ ಕಾಯ್ದೆ 66 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Join Whatsapp