Home ಟಾಪ್ ಸುದ್ದಿಗಳು ಪ್ರವಾದಿ ಪೈಗಂಬರ್ ಕುರಿತು ದ್ವೇಷ ಭಾಷಣ: ಯತಿ ನರಸಿಂಹಾನಂದ ವಿರುದ್ಧ ಕೊಪ್ಪಳದಲ್ಲಿ ಬೃಹತ್ ಪ್ರತಿಭಟನೆ

ಪ್ರವಾದಿ ಪೈಗಂಬರ್ ಕುರಿತು ದ್ವೇಷ ಭಾಷಣ: ಯತಿ ನರಸಿಂಹಾನಂದ ವಿರುದ್ಧ ಕೊಪ್ಪಳದಲ್ಲಿ ಬೃಹತ್ ಪ್ರತಿಭಟನೆ

ಕೊಪ್ಪಳ : ಪ್ರವಾದಿ ಮುಹಮ್ಮದ್ ಪೈಗಂಬರ್ ಕುರಿತಾಗಿ ಅವಹೇಳನಕಾರಿಯಾಗಿ ಮಾತನಾಡಿರುವ ಉತ್ತರಪ್ರದೇಶದ ಯತಿ ನರಸಿಂಹಾನಂದ ಸರಸ್ವತಿ ವಿರುದ್ಧ ಕೊಪ್ಪಳ ನಗರದಲ್ಲಿ ಮುಸ್ಲಿಮರು ಇಂದು (ಶುಕ್ರವಾರ) ಪ್ರತಿಭಟನೆ ನಡೆಸಿದರು.

ನಗರದ ಗಡಿಯಾರ ಕಂಬದದಿಂದ ಅಶೋಕ ವೃತ್ತದವರೆಗೆ ಮೆರವಣಿಗೆ ನಡೆಸಿ, ಪ್ರತಿಭಟನೆ ನಡೆಸಲಾಯಿತು. ಪ್ರವಾದಿ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ ನರಸಿಂಹಾನಂದರ ಹೇಳಿಕೆಯನ್ನು ಖಂಡಿಸಿದ ಪ್ರತಿಭಟನಾಕಾರರು, ಕೂಡಲೇ ಪ್ರಕರಣ ದಾಖಲಿಸಿ ಸೂಕ್ತ ಕಾನೂನು ರೀತಿಯ ಕಠಿಣ ಕ್ರಮ ಜರುಗಿಸುವಂತೆ ಒತ್ತಾಯಿಸಿದರು.

ಈ ಪ್ರತಿಭಟನೆಯಲ್ಲಿ ಮುಸ್ಲಿಂ ಧರ್ಮ ಗುರುಗಳು, ಮುಖಂಡರು ಸೇರಿದಂತೆ ಹಲವರು ಪಾಲ್ಗೊಂಡಿದ್ದರು

Join Whatsapp
Exit mobile version