ಮುಸ್ಲಿಮರ ವಿರುದ್ಧ ದ್ವೇಷಪೂರಿತ ಸಂಪಾದಕೀಯ: ಸ್ಟಾರ್ ಆಫ್ ಮೈಸೂರು ಪತ್ರಿಕೆಗೆ ಮೂರು ತಿಂಗಳ ಜಾಹೀರಾತು ಸ್ಥಗಿತ

Prasthutha|

ಮೈಸೂರಿನ “ಸ್ಟಾರ್ ಆಫ್ ಮೈಸೂರು” ಇಂಗ್ಲಿಷ್ ದಿನಪತ್ರಿಕೆ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ಅವಹೇಳನಕಾರಿ ಸಂಪಾದಕೀಯ ಪ್ರಕಟಿಸಿದ್ದನ್ನು ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ತೀವ್ರವಾಗಿ ಖಂಡಿಸಿದೆ. ಆ ಪತ್ರಿಕೆಗೆ ನಿರಂತರ ಮೂರು ತಿಂಗಳ ಕಾಲ ಯಾವುದೇ ಸರ್ಕಾರಿ ಜಾಹೀರಾತುಗಳನ್ನು ನೀಡಬಾರದು ಎಂದು ಆದೇಶಿಸಿದೆ.

- Advertisement -


“ಸ್ಟಾರ್ ಆಫ್ ಮೈಸೂರ್” ಮೈಸೂರಿನಲ್ಲಿ ಸಂಜೆ ಪ್ರಸಾರವಾಗುವ ಇಂಗ್ಲೀಷ್ ದಿನಪತ್ರಿಕೆಯಾಗಿದೆ. ‘ದೇಶದಲ್ಲಿ ಒಂದು ಸಮುದಾಯದ ಜನರು ಕೊಳೆತ ಸೇಬಿನಂತೆ, ಅವುಗಳನ್ನು ಸಿಂಗಾಪುರ್ ದೇಶದ ಹಿಂದಿನ ಮುಖಂಡ ಅಥವಾ ಇಸ್ರೇಲ್’ನ ಪ್ರಸಕ್ತ ಸರ್ಕಾರದ ಮಾದರಿಯಲ್ಲಿ ಹೊರಗೆ ಎಸೆಯಬೇಕು’ ಎಂದು 2020ರ ಎಪ್ರಿಲ್ 6 ರಂದು ದ್ವೇಷಪೂರಿತ ಸಂಪಾದಕೀಯ ಪ್ರಕಟಿಸಿತ್ತು. ಆ ಸಮಯದಲ್ಲಿ ಕೆ.ಬಿ.ಗಣಪತಿಯವರು ಮುಖ್ಯ ಸಂಪಾದಕರಾಗಿದ್ದರು.
ಮುಸ್ಲಿಂ ಸಮುದಾಯವನ್ನೇ ಗುರಿಪಡಿಸಿ ಕೊರೊನಾ ಕುರಿತು ಜಾಗೃತಿ ಮೂಡಿಸುವ ನೆಪದಲ್ಲಿ ಕೋಮುದ್ವೇಷ ಉಂಟುಮಾಡುವ ಸಂಪಾದಕೀಯವೊಂದು ಈ ಪತ್ರಿಕೆಯಲ್ಲಿ ಪ್ರಕಟಿಸಿ ಆಕ್ರೋಶಕ್ಕೆ ಒಳಗಾಗಿತ್ತು.


ನೇರವಾಗಿ ಮುಸ್ಲಿಂ ಸಮುದಾಯದ ಹೆಸರೆತ್ತದೆ ‘ದೇಶದ 18% ಜನರನ್ನು’ ಎಂದು ಸಂಪಾದಕೀಯದಲ್ಲಿ ಉಲ್ಲೇಖಿಸಲಾಗಿದೆ. ಈ ನಿಲುವು ಮುಸ್ಲಿಂ ಸಮುದಾಯದ ವಿರುದ್ಧವಾಗಿದೆ ಎಂದು ಸ್ಪಷ್ಟವಾಗಿ ತಿಳಿಯುತ್ತದೆ ಎಂದು ಹಲವು ಸಂಘ ಸಂಸ್ಥೆಗಳು ಆರೋಪಿಸಿದ್ದವು.
ಈ ಸಂಪಾದಕೀಯ ಮುಸ್ಲಿಮರ ವಿರುದ್ಧವಾಗಿದೆ, ಮಾತ್ರವಲ್ಲ ಎರಡು ಸಮುದಾಯಗಳ ವಿರುಧ್ದ ದ್ವೇಷಕ್ಕೆ ಪ್ರಚೋದನೆ ನೀಡುತ್ತಿದೆ ಎಂದು ‘ಫೋರಮ್ ಅಗೆನಿಸ್ಟ್ ಫೇಕ್ ನ್ಯೂಸ್’ ಎಂಬ ಮೈಸೂರು ಮೂಲದ ಸಂಘಟನೆ ಸಂಪಾದಕರಿಗೆ ಪತ್ರ ಬರೆದಿತ್ತು.

- Advertisement -


ಕೋವಿಡ್-19 ಹೋರಾಟಕ್ಕೆ ಸಂಬಂಧಿಸಿದಂತೆ ಬರೆದ ಈ ಲೇಖನ ಯಾವುದಾದರೂ ಸಮುದಾಯಕ್ಕೆ ನೋವುಂಟು ಮಾಡಿದ್ದರೆ ಕ್ಷಮಿಸುವುಂತೆ ಕೇಳಿಕೊಂಡಿದ್ದು ಸಂಪಾದಕ ಮಂಡಳಿಯಿಂದ ತಪ್ಪಾಗಿರುವುದನ್ನು ಒಪ್ಪಿಕೊಂಡು ಸ್ಟಾರ್ ಆಫ್ ಮೈಸೂರು ಪತ್ರಿಕೆ ಕ್ಷಮಾಪಣೆಯನ್ನು ಪ್ರಕಟಿಸಿತ್ತು.


ಕೋಮು ದ್ವೇಷದ ಮಾತುಗಳ ವಿರುದ್ಧದ ಜನಾಂದೋಲನ ಸಂಘಟನೆಯು ಪತ್ರಿಕೆಯ ವಿರುದ್ಧ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾಗೆ ದೂರು ನೀಡಿತ್ತು. ಅದರ ಆಧಾರದಲ್ಲಿ ಪಿಸಿಐ ವಿಚಾರಣಾ ಸಮಿತಿ ನೇಮಿಸಿತ್ತು. ತನಿಖೆಯ ನಂತರ ವಿಚಾರಣಾ ಸಮಿತಿಯು “ಪತ್ರಿಕೆಯು ಸಮಾಜದಲ್ಲಿ ಶಾಂತಿ ಕದಡುವಂತಹ ಅಥವಾ ಸಂವಿಧಾನದ ಉದ್ದೇಶಗಳ ಉಲ್ಲಂಘನೆ ಆಗುವಂತಹ ಯಾವುದೇ ರೀತಿಯ ಪ್ರಚೋದನಾಕಾರಿ ಬರವಣಿಗೆಗಳು ಪ್ರಕಟಗೊಳ್ಳದಿರುವುದನ್ನು ಖಾತ್ರಿಪಡಿಸುವಂತೆ” ಸೂಚಿಸಿದೆ. ಪತ್ರಿಕೋದ್ಯಮವು ಇಂತಹ ವಿಭವಿಸುವ ವಿಚಾರಗಳಲ್ಲಿ ತೊಡಗಿಕೊಳ್ಳಬಾರದು. ಎಲ್ಲಾ ಸಮುದಾಯದವರಲ್ಲಿ ಭ್ರಾತೃತ್ವದ ಸಂದೇಶವನ್ನು ಹರಡಬೇಕೆಂದು, ಭಾರತದ ಒಗ್ಗಟ್ಟಿನಲ್ಲಿ ವೈವಿಧ್ಯತೆಯನ್ನು ಪ್ರದರ್ಶಿಸುವಂತೆಯೂ ಹಾಗೂ ಕೋಮುವಾದವನ್ನು ಉತ್ತೇಜಿಸುವ ಯಾವುದೇ ರೀತಿಯ ಬರವಣಿಗೆಗಳನ್ನು ಪ್ರಕಟಿಸದಂತೆಯೂ ಸೂಚಿಸಿದೆ.


ದ್ವೇಷದ ಮಾತುಗಳ ವಿರುದ್ಧದ ಜನಾಂದೋಲನವು ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಆದೇಶವನ್ನು ಸ್ವಾಗತಿಸಿದ್ದು, ಇತರೆ ಮಾಧ್ಯಮಗಳಿಗೂ ಸಹ ಇದೊಂದು ಪಾಠವಾಗಬೇಕೆಂದು ಅಭಿಪ್ರಾಯಪಟ್ಟಿದೆ.

Join Whatsapp
Exit mobile version