ಹತ್ರಾಸ್ ದಲಿತ ಯುವತಿಯ ಸಾಮೂಹಿಕ ಅತ್ಯಾಚಾರ, ಕೊಲೆ ನಡೆದಿದೆ : ದೋಷಾರೋಪ ಪಟ್ಟಿ ಸಲ್ಲಿಸಿದ ಸಿಬಿಐ

Prasthutha|

ಲಖನೌ : ದೇಶಾದ್ಯಂತ ಭಾರೀ ಆಕ್ರೋಶವನ್ನುಂಟು ಮಾಡಿದ್ದ ಉತ್ತರ ಪ್ರದೇಶದ ಹತ್ರಾಸ್ ದಲಿತ ಯುವತಿಯ ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಇಂದು ದೋಷಾರೋಪ ಪಟ್ಟಿ ಸಲ್ಲಿಸಿದೆ. ಘಟನೆ ನಡೆದು ಮೂರು ತಿಂಗಳಲ್ಲಿ, ನಾಲ್ಕು ಮಂದಿ ದುಷ್ಕರ್ಮಿಗಳ ವಿರುದ್ಧ ದೋಷಾರೋಪ ದಾಖಲಾಗಿದೆ.

- Advertisement -

20ರ ಹರೆಯದ ದಲಿತ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಮತ್ತು ಕೊಲೆ ಮಾಡಲಾಗಿದೆ ಎಂದು ಸಿಬಿಐ ತಿಳಿಸಿರುವುದಾಗಿ ವರದಿಯೊಂದು ತಿಳಿಸಿದೆ. ಅಲ್ಲದೆ, ದುಷ್ಕರ್ಮಿಗಳ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯನ್ವಯವೂ ದೋಷಾರೋಪ ದಾಖಲಾಗಿದೆ.

ಸೆ.14ರಂದು ದಲಿತ ಯುವತಿಯ ಭೀಕರ ಅತ್ಯಾಚಾರ ನಡೆದಿತ್ತು. ಬಳಿಕ ಆಕೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಳು. ಘಟನೆಗೆ ಸಂಬಂಧಿಸಿ ಉತ್ತರ ಪ್ರದೇಶ ಪೊಲೀಸರು ಯುವತಿಯ ಮೃತದೇಹವನ್ನು ಕುಟುಂಬಸ್ಥರ ಅನುಮತಿ ಪಡೆಯದೆ ರಾತೋರಾತ್ರಿ ಅಂತ್ಯ ಸಂಸ್ಕಾರ ನಡೆಸಿದ್ದುದು ದೇಶಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು.  

- Advertisement -

ಈ ಹಿಂದೆ ಉತ್ತರ ಪ್ರದೇಶ ಪೊಲೀಸರು ಯುವತಿಯ ಮೇಲೆ ಅತ್ಯಾಚಾರ ನಡೆದಿಲ್ಲ ಎಂದು ಹೇಳಿಕೊಂಡಿದ್ದರು. ಇದೀಗ ಆರೋಪಿಗಳಾದ ಸಂದೀಪ್, ಲವ್ ಕೇಶ್, ರವಿ ಮತ್ತು ರಾಮು ವಿರುದ್ಧ ದೋಷಾರೋಪ ಸಲ್ಲಿಕೆಯಾಗಿದೆ.

Join Whatsapp