ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲು ಅನುಮತಿ ನೀಡಿದ ಹೈಕೋರ್ಟ್

Prasthutha|

ಬೆಂಗಳೂರು: ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ 2022ರ ಆಗಸ್ಟ್ 31ರಿಂದ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲು ಸೀಮಿತ ಅವಧಿಗೆ ಕರ್ನಾಟಕ ಹೈಕೋರ್ಟ್‌ ಅನುಮತಿ ನೀಡಿದೆ. ಹೀಗಾಗಿ, ಗಣೇಶೋತ್ಸವ ಆಯೋಜಿಸಲು ಅವಕಾಶ ದೊರೆತಂತಾಗಿದೆ.

- Advertisement -

ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಬರುವ ಕೋರಿಕೆಗಳನ್ನು ಪರಿಗಣಿಸಿ ಸೂಕ್ತ ಆದೇಶ ಹೊರಡಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಅನುಮತಿಸಿದೆ.

ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನವು ಆಟದ ಮೈದಾನವಾಗಿದ್ದು, ಪಕ್ಷಕಾರರು ಯಥಾಸ್ಥಿತಿ ಕಾಪಾಡಬೇಕು ಎಂದು ಕರ್ನಾಟಕ ಹೈಕೋರ್ಟ್‌ನ ಏಕಸದಸ್ಯ ಪೀಠ ಮಾಡಿರುವ ಆದೇಶ ಪ್ರಶ್ನಿಸಿರುವ ಮೇಲ್ಮನವಿಯ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾ. ಅಲೋಕ್ ಅರಾಧೆ ಮತ್ತು ನ್ಯಾ. ಎಸ್ ವಿಶ್ವಜಿತ್ ಶೆಟ್ಟಿ ಅವರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ನೀಡಿದೆ.

Join Whatsapp