ರಾಜ್ಯಸಭೆಯಲ್ಲಿ ಶಿರೂರು ಗುಡ್ಡ ಕುಸಿತ ಪ್ರಸ್ತಾಪಿಸಿದ ಹೆಚ್ ಡಿ ದೇವೇಗೌಡ

Prasthutha|

ನವದೆಹಲಿ: ರಾಜ್ಯಸಭೆಯಲ್ಲಿ ಶಿರೂರು ಗುಡ್ಡ ಕುಸಿತದ ಬಗ್ಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಪ್ರಸ್ತಾಪ ಮಾಡಿದ್ದಾರೆ.

- Advertisement -


ದುರಂತ ಸಂಭವಿಸಿ 10 ದಿನಗಳು ಕಳೆದರೂ ರಾಜ್ಯ ಸರ್ಕಾರದಿಂದ ಯಾರೊಬ್ಬರೂ ಭೇಟಿ ನೀಡಿರಲಿಲ್ಲ. ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ ನೀಡಿದ ಬಳಿಕವಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ದೂರಿದ್ದಾರೆ.


ಇದು ಕರ್ನಾಟಕ ಸರ್ಕಾರ ಹೇಗೆ ಕೆಲಸ ಮಾಡುತ್ತಿದೆ ಎಂಬುದಕ್ಕೆ ನಿದರ್ಶನ ಎಂದರು. ಕರ್ನಾಟಕ ಸರ್ಕಾರ ರಾಜ್ಯದ ಪರಿಸ್ಥಿತಿ ಬಗ್ಗೆ ನಿರಾಸಕ್ತಿ ತೋರುತ್ತಿದೆ. ಹೆಚ್ ಡಿ ಕುಮಾರಸ್ವಾಮಿ ಸ್ಥಳ ಪರಿಶೀಲನೆಗೆ ಹೋಗುವವರೆಗೂ ರಾಜ್ಯಸ ರ್ಕಾರ ಏನು ಮಾಡುತ್ತಿತ್ತು ಎಂದು ಪ್ರಶ್ನಿಸಿದ್ದು ರಾಜ್ಯಸಭೆಯಲ್ಲಿ ಗದ್ದಲ ಸೃಷ್ಟಿಸಿತು.



Join Whatsapp