ಕೋರ್ಟ್ ತೀರ್ಪು ಒಪ್ಪಿಕೊಳ್ಳಲೇಬೇಕು| ರಾಜಕೀಯ ಲಾಭ-ನಷ್ಟದ ಯೋಚನೆ ಮಾಡಲ್ಲ: ದೇವೇಗೌಡ

Prasthutha|

ಹೊಸದಿಲ್ಲಿ: ರಾಜ್ಯ ಹೈಕೋರ್ಟ್ ನೀಡಿರುವ ತೀರ್ಪಿನ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಹೈಕೋರ್ಟ್ ಆದೇಶವನ್ನು ನಾವು ಒಪ್ಪಿಕೊಳ್ಳಲೇಬೇಕು ಎಂದು ಹೇಳಿದ್ದಾರೆ. ಈ ಬಗ್ಗೆ ದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿದ ದೇವೇಗೌಡ ಈ ವಿಚಾರದಲ್ಲಿ ನಾವು ರಾಜಕೀಯ ಲಾಭ-ನಷ್ಟದ ಬಗ್ಗೆ ಯೋಚನೆ ಮಾಡುವುದಿಲ್ಲ, ಜೆಡಿಎಸ್ ಪಕ್ಷದ ನಿಲುವು ಹೈಕೋರ್ಟ್ ಆದೇಶದ ಪರವಾಗಿದೆ ಎಂದು ಹೇಳಿದ್ದಾರೆ.

- Advertisement -

ರಾಜ್ಯದಲ್ಲಿ ಶಾಂತಿ ಉಂಟಾಗಬೇಕು, ಶಿಕ್ಷಣಕ್ಕೆ ತೊಂದರೆಯಾಗಬಾರದು. ರಾಜ್ಯ ಸರ್ಕಾರವು ಹಿಜಾಬ್ ವಿಚಾರದಲ್ಲಿ ವಿಫಲವಾಗಿದೆ, ಈ ವಿಚಾರವನ್ನು ಇಷ್ಟು ದೊಡ್ಡಮಟ್ಟಕ್ಕೆ ಬೆಳೆಯಲು ಬಿಡಬಾರದಿತ್ತು ಎಂದು ಇದೇ ಸಂದರ್ಭ ಹೇಳಿದ್ದಾರೆ.

Join Whatsapp