ಮಾಜಿ ಶಾಸಕ ಎನ್.ಟಿ.ಬೊಮ್ಮಣ್ಣ  ನಿಧನಕ್ಕೆ ಹೆಚ್.ಡಿ.ಕುಮಾರಸ್ವಾಮಿ ಸಂತಾಪ

Prasthutha|

ಬೆಂಗಳೂರು: ಕೂಡ್ಲಿಗಿ ಕ್ಷೇತ್ರದ ಮಾಜಿ ಶಾಸಕ, ಜನತಾದಳ ಪಕ್ಷದ ಹಿರಿಯ ನಾಯಕರಾಗಿದ್ದ ಎನ್.ಟಿ.ಬೊಮ್ಮಣ್ಣ ಅವರ ಅಗಲಿಕೆಯು  ಪಕ್ಷಕ್ಕಾದ ತುಂಬಲಾರದ ನಷ್ಟ ಎಂದು ಮಾಜಿ ಮುಖ್ಯ ಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

- Advertisement -

ಈ ಕುರಿತು ಟ್ವೀಟ್ ಮಾಡಿರುವ ಅವರು, ಕೂಡ್ಲಿಗಿ ಕ್ಷೇತ್ರದ ಮಾಜಿ ಶಾಸಕ, ಜನತಾದಳ ಪಕ್ಷದ ಹಿರಿಯ ನಾಯಕರಾಗಿದ್ದ ಎನ್.ಟಿ.ಬೊಮ್ಮಣ್ಣ ಅವರ ನಿಧನ ತೀವ್ರ ದುಃಖ ಉಂಟು ಮಾಡಿದೆ. ಸರಳ, ಸಜ್ಜನಿಕೆ, ಸ್ನೇಹಶೀಲ ವ್ಯಕ್ತಿತ್ವದ ಅವರ ಅಗಲಿಕೆ ಪಕ್ಷಕ್ಕಾದ ದೊಡ್ಡ ನಷ್ಟ. ವೈಯಕ್ತಿಕವಾಗಿ ನಾನೂ ಉತ್ತಮ ಗೆಳೆಯರೊಬ್ಬರನ್ನು ಕಳೆದುಕೊಂಡಂತೆ ಆಗಿದೆ ಎಂದರು.

ಎನ್.ಟಿ.ಬೊಮ್ಮಣ್ಣ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖ ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ಭಗವಂತ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ. ಕೂಡ್ಲಿಗಿ ಕ್ಷೇತ್ರಕ್ಕೆ ಅವರು ಕೊಟ್ಟ ಸ್ಮರಣೀಯ ಕೊಡುಗೆಗಳು ಹಾಗೂ ಪಕ್ಷಕ್ಕೆ ಸಲ್ಲಿಸಿದ ಸೇವೆ ಎಂದೆಂದಿಗೂ ಹಸಿರಾಗಿರುತ್ತದೆ ಎಂದು ಸಂತಾಪ ಸೂಚಿಸಿದರು.

Join Whatsapp