ಎಚ್.ಡಿ.ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಸೋಮವಾರಕ್ಕೆ ಮುಂದೂಡಿಕೆ

Prasthutha|

ಬೆಂಗಳೂರು : ಅಪಹರಣ ಪ್ರಕರಣದಲ್ಲಿ ಬಂಧನವಾಗಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಸೋಮವಾರಕ್ಕೆ ಮುಂದೂಡಿಕೆ ಆಗಿದೆ.

- Advertisement -


ಹೊಳೆನರಸೀಪುರ ಶಾಸಕ ಎಚ್.ಡಿ.ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ನ್ಯಾಯಾಧೀಶರು, ಸುದೀರ್ಘವಾದ ವಾದ ಪ್ರತಿವಾದ ಆಲಿಸಿ ಹೆಚ್ಚಿನ ವಿಚಾರಣೆಗಾಗಿ ಮೇ.13 ಕ್ಕೆ ಮುಂದೂಡಿದೆ. ಇದರಿಂದ ಜಾಮೀನು ಸಿಗುವ ನಂಬಿಕೆಯಲ್ಲಿದ್ದ ಮಾಜಿ ಸಚಿವ ರೇವಣ್ಣಗೆ ಬಾರಿ ನಿರಾಸೆಯಾಗಿದೆ.

Join Whatsapp