ಎರಡು ಸೀಟಿಗಾಗಿ ಇಷ್ಟೆಲ್ಲಾ ಪ್ರಯತ್ನ ಪಡೆಬೇಕಾ?: ಬಿಜೆಪಿ ವಿರುದ್ಧ ಕುಮಾರಸ್ವಾಮಿ ಅಸಮಾಧಾನ

Prasthutha|

- Advertisement -

ಬೆಂಗಳೂರು: ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಸೀಟು ಹಂಚಿಕೆ ಮಾತುಕತೆ ಮುಂದುವರಿದಿದೆ.

ಹಾಸನ ಮಂಡ್ಯ ಕ್ಷೇತ್ರಗಳು ಜೆಡಿಎಸ್​ಗೆ ಬಿಟ್ಟುಕೊಡಲು ಬಿಜೆಪಿ ಒಪ್ಪಿಗೆ ಸೂಚಿಸಿದರೂ ಕೋಲಾರ ಕ್ಷೇತ್ರವನ್ನು ಬಿಟ್ಟುಕೊಡಲು ಹಿಂದೇಟು ಹಾಕುತ್ತಿದೆ.

- Advertisement -

ಈ ಕುರಿತು ಮಾತನಾಡಿದ ಎಚ್​ಡಿ ಕುಮಾರಸ್ವಾಮಿ, ಎರಡು ಕ್ಷೇತ್ರಗಳಿಗಾಗಿ ಇಷ್ಟೆಲ್ಲಾ ಪ್ರಯತ್ನ ಮಾಡಬೇಕಾ? ಹೊಂದಾಣಿಕೆ ಬೇಕಾ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಮ್ಮ ಉದ್ದೇಶ ಕಾಂಗ್ರೆಸ್​ ಪಕ್ಷವನ್ನು ಎಲ್ಲಾ 28 ಕ್ಷೇತ್ರಗಳಲ್ಲಿ ಸೋಲಿಸುವುದಾಗಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಬಿಜಾಪುರ ಕಲುಬರ್ಗಿಯಲ್ಲಿ ನಮ್ಮ ಶಕ್ತಿ ಬಿಜೆಪಿಗಿಂತ ಹೆಚ್ಚಾಗಿದೆ. ಇಂತಹ ಕ್ಷೇತ್ರಗಳಲ್ಲಿ ನಮ್ಮನ್ನ ಹೇಗೆ ಬಳಕೆ ಮಾಡಿಕೊಳ್ಳಬೇಕು ಎಂಬುದಕ್ಕೆ ಬಿಜೆಪಿ ಹೈಕಮಾಂಡ್ ಜೊತೆ ಚರ್ಚೆಯಾಗಬೇಕು. ನಮ್ಮನ್ನ ಕಡೆಗಣಿಸಿದರೆ ಅದರಿಂದಾಗುವ ಪರಿಣಾಮಗಳನ್ನು ಸಭೆಯಲ್ಲಿ ಚರ್ಚೆ ಮಾಡಿದ್ದೇವೆ ಎಂದರು.

Join Whatsapp
Exit mobile version