Home ಟಾಪ್ ಸುದ್ದಿಗಳು ಕರ್ನಾಟಕದಲ್ಲಿ ಹೆಚ್’ಡಿಕೆ, ಬೊಮ್ಮಾಯಿ ಇಬ್ಬರೇ ಸತ್ಯಹರಿಶ್ಚಂದ್ರರು: ಹೆಚ್.ವಿಶ್ವನಾಥ್ ವ್ಯಂಗ್ಯ

ಕರ್ನಾಟಕದಲ್ಲಿ ಹೆಚ್’ಡಿಕೆ, ಬೊಮ್ಮಾಯಿ ಇಬ್ಬರೇ ಸತ್ಯಹರಿಶ್ಚಂದ್ರರು: ಹೆಚ್.ವಿಶ್ವನಾಥ್ ವ್ಯಂಗ್ಯ

ಬೆಂಗಳೂರು: ಸತ್ಯಹರಿಶ್ಚಂದ್ರ ಸತ್ತ ಮೇಲೆ ರಾಜ್ಯದಲ್ಲಿ ಇಬ್ಬರೇ ಸತ್ಯಹರಿಶ್ಚಂದ್ರರಿದ್ದಾರೆ. ಒಬ್ಬರು ಹೆಚ್.ಡಿ ಕುಮಾರಸ್ವಾಮಿ, ಇಬ್ಬೊಬ್ಬರು ಬಸವರಾಜ ಬೊಮ್ಮಾಯಿ ಎಂದು ವಿಧಾನ ಪರಿಷತ್ತು ಸದಸ್ಯ ಹೆಚ್.ವಿಶ್ವನಾಥ್ ವ್ಯಂಗ್ಯವಾಡಿದ್ದಾರೆ.


ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೊಮ್ಮಾಯಿ ಹಾಗೂ ಕುಮಾರಸ್ವಾಮಿ ಇಬ್ಬರೂ ಮುಖ್ಯಮಂತ್ರಿ ಆಗಿದ್ದವರು. ಆಗ ಮಾಡಿದ ಅದ್ವಾನಗಳನ್ನು ಜನ ಈಗಲೂ ಅನುಭವಿಸುತ್ತಿದ್ದಾರೆ. ಅವರು ಸುಮ್ಮನೆ ಬಾಯಿಗೆ ಬಂದಂತೆ ಮಾತನಾಡಬಾರದು. ಕುಮಾರಸ್ವಾಮಿಯವರೇ ಈಗ ಆ ಪೆನ್ಡ್ರೈವ್ ಏನಾಯ್ತು ಎಂದು ಪ್ರಶ್ನಿಸಿದ್ದಾರೆ.


ಕುಮಾರಸ್ವಾಮಿಯವರು ಸುಮ್ಮನೆ ಏನೇನೋ ಆರೋಪ ಮಾಡುತ್ತಾರೆ. ಆದರೆ ಯಾವುದನ್ನು ಸಾಬೀತು ಮಾಡಿದ್ದಾರೆ? ಅವರು ಸಹ ಮುಖ್ಯಮಂತ್ರಿ ಆಗಿದ್ದವರು. ಅವರು ಆಡುವ ಮಾತಿನಿಂದ ಅವರದ್ದೇ ಘನತೆ ಕಡಿಮೆ ಆಗುತ್ತಿದೆ ಎಂದರು.

Join Whatsapp
Exit mobile version