Home ಕರಾವಳಿ ಎಚ್ ಡಿಕೆ ಹಾಗೂ ಸಿದ್ದರಾಮಯ್ಯ ಇಬ್ಬರಿಗೂ ಹುಚ್ಚು ಹಿಡಿದಿದೆ: ನಳಿನ್ ಕುಮಾರ್

ಎಚ್ ಡಿಕೆ ಹಾಗೂ ಸಿದ್ದರಾಮಯ್ಯ ಇಬ್ಬರಿಗೂ ಹುಚ್ಚು ಹಿಡಿದಿದೆ: ನಳಿನ್ ಕುಮಾರ್

ಬೆಂಗಳೂರು:  ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಇಬ್ಬರು ಬುದ್ಧಿ ಸ್ಥಿಮಿತ ಕಳೆದುಕೊಂಡ ಹಾಗೆ ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ನಳೀನ್ ಕುಮಾರ್ ಕಟೀಲ್, ಕುಮಾರಸ್ವಾಮಿ ಕುರುಡು ಕಣ್ಣಿನಿಂದ ಆರ್.ಎಸ್.ಎಸ್. ನೋಡಿದ್ದಾರೆ. ಹೆಚ್.ಡಿ.ಕೆ, ಸಿದ್ದರಾಮಯ್ಯ ಸಂಘದ ಕಚೇರಿಗೆ ಬಂದು ನೋಡಲಿ. ಆನಂತರ ಆರ್.ಎಸ್.ಎಸ್. ಸಂಘಟನೆ ಬಗ್ಗೆ ಮಾತನಾಡಲಿ ಎಂದರು.

ಅಧಿಕಾರ ಇಲ್ಲದಿದ್ದಾಗ ವ್ಯಕ್ತಿಗಳು ಸ್ಥಿಮಿತ ಕಳೆದುಕೊಳ್ಳುತ್ತಾರೆ ಹಾಗೇ ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿಯವರಿಗೆ ಅಧಿಕಾರ ಇಲ್ಲದೆಯೇ ಹುಚ್ಚು ಹಿಡಿದಿದೆ. ಅನಗತ್ಯವಾಗಿ ಚಿಲ್ಲರೆ ರಾಜಕಾರಣ ಮಾಡಿ ವ್ಯಕ್ತಿತ್ವ ಹಾಳು ಮಾಡಿಕೊಳ್ಳಬೇಡಿ ಎಂದು ತಿಳಿಸಿದರು.

Join Whatsapp
Exit mobile version