ಸಿ ಎಂ ಗೆ ಜನರ ಸಮಸ್ಯೆಗಿಂತ ಚಲನ ಚಿತ್ರದ ಪ್ರಚಾರ ಮಹತ್ವದ್ದಾಗಿದೆ: ಬೊಮ್ಮಾಯಿ ವಿರುದ್ಧ ಹೆಚ್ ಡಿ ಕೆ ವಾಗ್ದಾಳಿ

Prasthutha|

ತುಮಕೂರು: ಪಾವಗಡದಲ್ಲಿ ಭೀಕರ ಅಪಘಾತವಾಗಿ ಜನರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರೂ ನಮ್ಮ ಮುಖ್ಯಮಂತ್ರಿ ಅದನ್ನೆಲ್ಲಾ ಮರೆತು ಚಲನ ಚಿತ್ರ ಬಿಡುಗಡೆ ಸಮಾರಂಭದಲ್ಲಿ ಭಾಗಿಯಾಗಿದ್ದಾರೆ. ಅವರಿಗೆ ಜನರ ಸಮಸ್ಯೆಗಿಂತ ಚಲನ ಚಿತ್ರದ ಪ್ರಚಾರ ಮಹತ್ವದ್ದಾಗಿದೆ  ಎಂದು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದರು.

- Advertisement -

ಭಾನುವಾರ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ, ಪಾವಗಡದಲ್ಲಿ ಶನಿವಾರ ನಡೆದ ಅಪಘಾತದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಲ್ಕು ಗಂಟೆಗಳ ಕಾಲ ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರು ಸಿನಿಮಾ ಪ್ರಚಾರಕ್ಕಾಗಿ ಸಮಯ ವ್ಯಯಿಸಿದ್ದಾರೆ. ಆದರೆ ಅದರಲ್ಲಿ ಅಂತಹ ವಿಶೇಷ ಏನಿದೆ ಎನ್ನುವುದೇ ಗೊತ್ತಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸರ್ಕಾರದ ನಿರ್ಲಕ್ಷ್ಯದಿಂದ ಸಮಸ್ಯೆ ಎದುರಾಗಿದೆ. ಪರೀಕ್ಷೆಯಿಂದ ವಂಚಿತರಾದ  ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ವಿಶೇಷ ಅವಕಾಶ ಕಲ್ಪಿಸಬೇಕು. ಮೃತಪಟ್ಟವರು ಮತ್ತು ಗಾಯಗೊಂಡವರು ಅತ್ಯಂತ ಕಡು ಬಡವರಿದ್ದಾರೆ. ಮೃತ ಕುಟುಂಬಗಳಿಗೆ ₹25 ಲಕ್ಷ ಪರಿಹಾರ ನೀಡುವುದರ ಜೊತೆಗೆ ಗಾಯಾಳುಗಳಿಗೆ ಉಚಿತವಾಗಿ ಚಿಕಿತ್ಸೆ ನೀಡಬೇಕು ಎಂದು ಹೇಳಿದರು.

- Advertisement -

ಜನರ ಸಮಸ್ಯೆಗಳನ್ನು ಬಗೆಹರಿಸಿ ಚುನಾವಣೆಗೆ ಸಿದ್ಧರಾಗುವ ಬದಲು ಭಾವನಾತ್ಮಕವಾಗಿ ಮತ ಪಡೆಯುವ ಕೆಲಸ ಮಾಡುತ್ತಿದ್ದಾರೆ. ಜನರು ಈ ವಿಷಯದ ಕುರಿತು ಜಾಗೃತರಾಗಬೇಕು ಎಂದು ಎಚ್ಚರಿಕೆ ನೀಡಿದರು.

Join Whatsapp