ಕಾಂಗ್ರೆಸ್ ಪ್ರತಿಭಟನೆ ಕೋವಿಡ್ ಹೆಚ್ಚಳಕ್ಕೆ ಕಾರಣವಾಗ್ತಿದೆ ಎಂದ ಆರೋಗ್ಯ ಸಚಿವ ಸುಧಾಕರ್ !

Prasthutha|

ಬೆಂಗಳೂರು: ಇಡಿ ವಿಚಾರಣೆಯ ವಿರುದ್ಧ ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿಕ್ರಿಯಿಸಿರುವ ರಾಜ್ಯ ಆರೋಗ್ಯ ಸಚಿವ ಡಾ.ಸುಧಾಕರ್, ರಾಜ್ಯದಲ್ಲಿ ಕೋವಿಡ್ ಪ್ರಕರಣ ಹೆಚ್ಚಾಗಲು ಕಾಂಗ್ರೆಸ್ ಪ್ರತಿಭಟನೆ ಕಾರಣವಾಗುತ್ತಿದೆ ಎಂದು ಆರೋಪಿಸಿದ್ದಾರೆ. ಪ್ರತಿಭಟನೆ ನಡೆಸಲು ಕಾಂಗ್ರೆಸ್’ಗೆ ಅವಕಾಶವಿಲ್ಲ, ಬೇಕಿದ್ದರೆ ಫ್ರೀಡಂ ಪಾರ್ಕ್’ನಲ್ಲಿ ಪ್ರತಿಭಟನೆ ನಡೆಸಲಿ ಎಂದು ಕಿಡಿಕಾರಿದ್ದಾರೆ.

- Advertisement -

ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಜಾಸ್ತಿಯಾದರೆ ಕಾಂಗ್ರೆಸ್ ಪಕ್ಷವೇ ನೇರ ಹೊಣೆ ಹೊರಬೇಕು, ಇವರ ನಡೆ ನಾಚಿಕೆ ತರಿಸುವಂತಿದೆ, ಒಂದೆಡೆ ಸಂವಿಧಾನದ ಬಗ್ಗೆ ಭಾಷಣ ಬಿಗಿಯುತ್ತಾರೆ, ಇನ್ನೊಂದೆಡೆ ಸಂವಿಧಾನಕ್ಕೆ ಅಗೌರವ ತೋರುತ್ತಿದ್ದಾರೆ ಎಂದು ಸುಧಾಕರ್ ವಾಗ್ದಾಳಿ ನಡೆಸಿದ್ದಾರೆ.

ಈ ಹಿಂದೆಯೂ ನರಸಿಂಹರಾವ್, ಸೀತಾರಾಮ್ ಕೇಸರಿ ವಿರುದ್ಧವ ವಿಚಾರಣೆ ನಡೆದಿತ್ತು, ಕಾಂಗ್ರೆಸ್ ನಾಯಕ ಖರ್ಗೆ ಅವರನ್ನೂ ವಿಚಾರಣೆಗೆ ಒಳಪಡಿಸಲಾಗಿತ್ತು. ಆಗ ಸುಮ್ಮನಿದ್ದವರು ಈಗ ಯಾಕೆ ಹೋರಾಟ ಮಾಡುತ್ತಿದ್ದಾರೆ ಎಂದು ಸಚಿವ ಸುಧಾಕರ್ ಪ್ರಶ್ನಿಸಿದ್ದಾರೆ.

Join Whatsapp