Home ಕರಾವಳಿ ಕರ್ತವ್ಯದಲ್ಲಿರುವಾಗಲೇ ಹೃದಯಾಘಾತ: ಸಮಯಪ್ರಜ್ಞೆ ಮೆರೆದು ವಿದ್ಯಾರ್ಥಿಗಳನ್ನು ಪಾರು ಮಾಡಿದ ಚಾಲಕ

ಕರ್ತವ್ಯದಲ್ಲಿರುವಾಗಲೇ ಹೃದಯಾಘಾತ: ಸಮಯಪ್ರಜ್ಞೆ ಮೆರೆದು ವಿದ್ಯಾರ್ಥಿಗಳನ್ನು ಪಾರು ಮಾಡಿದ ಚಾಲಕ

ಉಡುಪಿ: ವಿದ್ಯಾರ್ಥಿಗಳಿದ್ದ ಶಾಲಾ ಬಸ್‌ ಚಾಲನೆ ಮಾಡುತ್ತಿರುವ ವೇಳೆಯಲ್ಲಿ ಚಾಲಕನಿಗೆ ಹೃದಯಾಘಾತ ವಾಗಿದ್ದು, ಅವರು ಸಮಯ ಪ್ರಜ್ಞೆ ಮೆರೆದು ಬಸ್ಸಿನಲ್ಲಿದ್ದ ವಿದ್ಯಾರ್ಥಿಗಳನ್ನು ಅಪಾಯದಿಂದ ಪಾರು ಮಾಡಿದ ಘಟನೆ ಉಡುಪಿ ನಗರದ ಪೆರಂಪಳ್ಳಿಯಲ್ಲಿ ನಡೆದಿದೆ.

ಆಲ್ವಿನ್‌ ಬಸ್ ಚಾಲನೆಯಲ್ಲಿರುವಾಗಲೇ ಹೃದಯಾಘಾತಕ್ಕೆ ಒಳಗಾದವರು‌. ಬ್ರಹ್ಮಾವರದ ಖಾಸಗಿ ಆಂಗ್ಲ ಮಾಧ್ಯಮ ಶಾಲೆಯಿಂದ 66 ಮಕ್ಕಳನ್ನು ಹತ್ತಿಸಿಕೊಂಡು ಶಾಲೆಯಿಂದ ಬಸ್ ಹೊರಟ್ಟಿತ್ತು. ಬಸ್ ಪೆರಂಪಳ್ಳಿಗೆ ತಲುಪಿದಾಗ ಚಾಲಕ ಆಲ್ವಿನ್‌ ಅವರಿಗೆ ಹೃದಯಾಘಾತವಾಗಿದೆ. ಹೃದಯಾಘಾತದ ಸೂಚನೆ ಸಿಕ್ಕ ಚಾಲಕ ಕೂಡಲೇ ಬಸ್ಸು ನಿಯಂತ್ರಣ ತಪ್ಪುತ್ತಿರುವುದು ಅವರ ಗಮನಕ್ಕೆ ಬಂದಿದೆ. ಅಪಘಾತವಾಗುವ ಸಾಧ್ಯತೆಯಲ್ಲಿ ಬಸ್ಸನ್ನು ಎಡಕ್ಕೆ ತಿರುಗಿಸಿ ರಸ್ತೆಯ ಪಕ್ಕಕ್ಕೆ ನಿಲ್ಲಿಸಿದ್ದಾರೆ. ಇದರಿಂದಾಗಿ ಅನಾಹುತವೊಂದು ತಪ್ಪಿದೆ. ಚಾಲಕನಿಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದ್ದು, ಆಸ್ಪತ್ರೆಯಲ್ಲಿರುವ ಅವರ ಶೀಘ್ರ ಚೇತರಿಕೆಗೆ ವಿದ್ಯಾರ್ಥಿ ಪೋಷಕರು ಪ್ರಾರ್ಥಿಸಿದ್ದಾರೆ.

ಬಸ್ಸಿನಲ್ಲಿದ್ದ ಸಹಾಯಕ ಸಿಬ್ಬಂದಿ ಮತ್ತೊಂದು ವಾಹನದಲ್ಲಿ ಚಾಲಕ ಆಲ್ವಿನ್‌ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಸದ್ಯ ಆಲ್ವಿನ್‌ ಅವರಿಗೆ ಚಿಕಿತ್ಸೆ ಮುಂದುವರಿದಿದೆ.

Join Whatsapp
Exit mobile version