Home ಕರಾವಳಿ ಮಂಗಳೂರು ಸೇರಿದಂತೆ ದ.ಕ ಜಿಲ್ಲಾದ್ಯಂತ ಭಾರಿ ಮಳೆ: ಜನಜೀವನ ಅಸ್ತವ್ಯಸ್ತ

ಮಂಗಳೂರು ಸೇರಿದಂತೆ ದ.ಕ ಜಿಲ್ಲಾದ್ಯಂತ ಭಾರಿ ಮಳೆ: ಜನಜೀವನ ಅಸ್ತವ್ಯಸ್ತ

ಮಂಗಳೂರು: ಜಿಲ್ಲಾದ್ಯಂತ ಗಾಳಿ ಸಹಿತ ಭಾರೀ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಸೋಮವಾರದಿಂದ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಹಲವು ಪ್ರದೇಶಗಳಲ್ಲಿ ಹಾನಿಯಾಗಿದ್ದು, ಮಂಗಳೂರಿನಲ್ಲಿ ತಗ್ಗು ಪ್ರದೇಶದ ರಸ್ತೆಗಳು ಜಲಾವೃತವಾಗಿದೆ.

ನಗರದ ಕೊಟ್ಟಾರಚೌಕಿ, ಮಾಲೆಮಾರ್, ಪಡೀಲ್, ಕುಳೂರು ಪ್ರದೇಶದ ರಸ್ತೆ ಜಲಾವೃತವಾಗಿದೆ.

ರಸ್ತೆ ಜಲಾವೃತ ಹಿನ್ನಲೆಯಲ್ಲಿ ವಾಹನ ಸವಾರರು ಪರದಾಟ ಅನುಭವಿಸಿದ್ದು, ರಸ್ತೆ ಸಂಚಾರ ಸುಗುಮಗೊಳಿಸಲು ರಸ್ತೆಗಿಳಿದ ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ ಸುಗಮ‌ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ.

ಭಾರೀ ಮಳೆಗೆ ಕುಸಿತಗೊಂಡ ದೇರೆಬೈಲು ರಸ್ತೆ

ನಿನ್ನೆ ದಿನವಿಡೀ ಸುರಿದ ಮಳೆಗೆ ದೇರೆಬೈಲ್ ಲ್ಯಾಂಡ್ ಲಿಂಕ್ಸ್ ಬಳಿ ರಸ್ತೆ ಕುಸಿದಿದೆ.

Join Whatsapp
Exit mobile version