Home ಟಾಪ್ ಸುದ್ದಿಗಳು ಕೇರಳದಲ್ಲಿ ಭಾರೀ ಮಳೆ: 18 ಮಂದಿ ಸಾವು, ಸೇನೆಯ ಸಹಾಯಬೇಕೆಂದ ಸಿಎಂ ಪಿಣರಾಯಿ ವಿಜಯನ್

ಕೇರಳದಲ್ಲಿ ಭಾರೀ ಮಳೆ: 18 ಮಂದಿ ಸಾವು, ಸೇನೆಯ ಸಹಾಯಬೇಕೆಂದ ಸಿಎಂ ಪಿಣರಾಯಿ ವಿಜಯನ್

ತಿರುವನಂತಪುರ: ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕೇರಳದಲ್ಲಿ ವಿಪರೀತವಾಗಿ ಮಳೆ ಸುರಿಯುತ್ತಿದ್ದು,  ಜನಜೀವನ ಅಸ್ತವ್ಯಸ್ತವಾಗಿದೆ.

ಇಲ್ಲಿಯವರೆಗೆ ಸುಮಾರು 18 ಮಂದಿ ಮೃತಪಟ್ಟಿದ್ದು,  12ಕ್ಕೂ ಹೆಚ್ಚು ಜನರು ಕಾಣೆಯಾಗಿದ್ದಾರೆ.

ಈ ಬಗ್ಗೆ ಚರ್ಚಿಸಲು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್​ ಅವರು ನಿನ್ನೆ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಕೊಟ್ಟಾಯಂ ಸೇರಿ, ಎಲ್ಲ  ಪ್ರವಾಹ ಮತ್ತು ಭೂಕುಸಿತ ಪೀಡಿತ ಪ್ರದೇಶಗಳಿಂದ ಜನರನ್ನು ಸ್ಥಳಾಂತರಗೊಳಿಸಲು ಏನೇನು ವ್ಯವಸ್ಥೆಯ ಅಗತ್ಯವಿದೆಯೋ ಅದನ್ನೆಲ್ಲ ಮಾಡಲಾಗುವುದು ಎಂದು ಹೇಳಿದ್ದಾರೆ.  ಸಭೆಯ ಬಳಿಕ ಹೇಳಿಕೆ ಬಿಡುಗಡೆ ಮಾಡಿರುವ ಪಿಣರಾಯಿ ವಿಜಯನ್​, ಕೇರಳದ ಹಲವು ಭಾಗಗಳಲ್ಲಿ ಮಳೆಯಿಂದಾಗಿ ಗಂಭೀರ ಪರಿಸ್ಥಿತಿ ಉಂಟಾಗಿದೆ. ಜನ-ಜಾನುವಾರಗಳ ರಕ್ಷಣೆಗೆ ಏನುಬೇಕಾದರೂ ಮಾಡಲು ನಾವು ಸಿದ್ಧರಿದ್ದೇವೆ. ನಮಗೆ ಈಗ ಭಾರತೀಯ ಸೇನೆಯ ಭೂ, ವಾಯು ಮತ್ತು ನೌಕಾಪಡೆಗಳಿಂದ ಸಹಾಯ ಬೇಕು. ಅಗತ್ಯವಿರುವ ಜಿಲ್ಲೆಗಳಲ್ಲಿ ಎಲ್ಲ ಕಡೆ ಆಶ್ರಯ ಶಿಬಿರಗಳನ್ನು ರಚಿಸಲಾಗಿದೆ ಎಂದು ತಿಳಿಸಿದರು.

ಪಥನಾಂತಿಟ್ಟ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ ಮತ್ತು ತ್ರಿಶೂರ್ ಜಿಲ್ಲೆಗಳಲ್ಲಿ ‘ರೆಡ್ ಅಲರ್ಟ್’ ಘೋಷಿಸಲಾಗಿದೆ.

 ತಿರುವನಂತಪುರ, ಕೊಲ್ಲಂ, ಅಲಪ್ಪುಳ, ಪಲಕ್ಕಾಡ್, ಮಲಪ್ಪುರಂ, ಕೋಯಿಕ್ಕೋಡ್ ಮತ್ತು ವಯನಾಡ್  ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ.

Join Whatsapp
Exit mobile version