ಕೇರಳದಲ್ಲಿ ಭಾರೀ ಮಳೆಗೆ ತತ್ತರಿಸಿದ ಜನತೆ: ಸಾವಿನ ಸಂಖ್ಯೆ 24ಕ್ಕೆ ಏರಿಕೆ

Prasthutha|

ತಿರುವನಂತಪುರ: ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಕೇರಳದಲ್ಲಿ ಐದಾರು ದಿನಗಳಿಂದ ವಿಪರೀತವಾಗಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

- Advertisement -


ಶನಿವಾರದಿಂದ ಇಲ್ಲಿಯವರೆಗೆ 24 ಜನರು ಮೃತಪಟ್ಟಿದ್ದಾರೆ. 11 ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಣೆಯಾಗಿದೆ. ಭೂ ಕುಸಿತದಿಂದ ಉಂಟಾದ ದುರ್ಘಟನೆಯಲ್ಲಿ ಹೆಚ್ಚಿನ ಸಾವು ಸಂಭವಿಸಿದ್ದು, ಇದುವರೆಗೆ 13 ಮೃತದೇಹಗಳು ಕೊಟ್ಟಾಯಂ ಜಿಲ್ಲೆಯಲ್ಲಿ ಪತ್ತೆಯಾಗಿವೆ. ಕೊಟ್ಟಾಯಂ ಮತ್ತು ಇಡುಕ್ಕಿಯಲ್ಲಿ ಭಾರಿ ಪ್ರಮಾಣದ ಭೂಕುಸಿತ ಸಂಭವಿಸಿದ್ದು, ಈ ಎರಡು ಜಿಲ್ಲೆಗಳಲ್ಲಿ ಅಪಾರ ಪ್ರಮಾಣದ ಹಾನಿ ಉಂಟಾಗಿದೆ.


ಕೊಟ್ಟಾಯಂನ ಮುಂಡಕಾಯಂ ಎಂಬಲ್ಲಿ ಮನೆಯೊಂದು ರಭಸವಾದ ನೀರಿನಲ್ಲಿ ಕೊಚ್ಚಿಕೊಂಡು ಹೋಗುತ್ತಿರುವ ಭಯಾನಕ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

- Advertisement -

ಜನರು ನೋಡು ನೋಡುತ್ತಿದಂತೆಯೇ ಅವರ ಕಣ್ಣೆದುರಲ್ಲೇ ಮನೆ ನದಿಗೆ ಉರುಳಿ ಬಿದ್ದು, ಕೊಚ್ಚಿಕೊಂಡು ಹೋಗುತ್ತದೆ. ಅದರ ಗೋಡೆಗಳು ಕುಸಿಯುವುದಿಲ್ಲ. ಬದಲಿಗೆ ಇಡೀ ಮನೆಯೇ ಬುಡಸಮೇತ ಬೀಳುವ ದೃಶ್ಯ ಹೆದರಿಕೆ ಹುಟ್ಟಿಸುವಂತಿದೆ.

Join Whatsapp