ಬೆಂಗಳೂರಿನಲ್ಲಿ ದಿಢೀರ್ ಮಳೆ: ವಾಹನ ಸವಾರರು ಪರದಾಟ

Prasthutha|

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಎಫೆಕ್ಟ್ ಹಿನ್ನೆಲೆ ಸಿಲಿಕಾನ್ ಸಿಟಿಯಲ್ಲಿ ಮಳೆ ಆರ್ಭಟ ಶುರುವಾಗಿದೆ.

- Advertisement -


ನಗರದ ಮೆಜೆಸ್ಟಿಕ್, ಕಾರ್ಪೊರೇಷನ್, ಕೋರಮಂಗಲ, ಆಡುಗೋಡಿ, ಮಡಿವಾಳ, ಬನ್ನೇರುಘಟ್ಟ ರಸ್ತೆ ಸೇರಿದಂತೆ ಹಲವೆಡೆ ಜೋರು ಮಳೆ ಸುರಿದಿದೆ. ದಿಢೀರ್ ಮಳೆಯಿಂದ ವಾಹನ ಸವಾರರು ಪರದಾಡಿದ್ದಾರೆ.


ಮಧ್ಯಾಹ್ನದ ಬಳಿಕ ಮಳೆರಾಯ ಎಂಟ್ರಿಕೊಟ್ಟ ಹಿನ್ನೆಲೆ ಮೆಜೆಸ್ಟಿಕ್, ಕೆಆರ್ ಸರ್ಕಲ್, ವಿಧಾನ ಸೌಧ ಸುತ್ತಮುತ್ತ ಬಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ಜಾಮ್ನಲ್ಲಿ ಸಿಲುಕಿ ದ್ವಿಚಕ್ರ ವಾಹನ ಸವಾರರು ಪರದಾಟ ನಡೆಸಿದ್ದಾರೆ. ಇನ್ನು ಮಳೆಯಿಂದ ರಕ್ಷಣೆ ಪಡೆಯಲು ಜನರು ಫ್ಲೈಓವರ್ ಕೆಳಗೆ ನಿಂತ್ತುಕೊಂಡಿದ್ದಾರೆ. ಮಳೆ ಆರ್ಭಟಕ್ಕೆ ರಸ್ತೆಗಳು ಕೆರೆಯಂತಾಗಿವೆ.



Join Whatsapp