ಬೆಂಗಳೂರಿನಲ್ಲಿ ಭಾರಿ ಮಳೆ: ಉರುಳಿದ ಮರ, ಜನಜೀವನ ಅಸ್ತವ್ಯಸ್ತ

Prasthutha|

ಬೆಂಗಳೂರು: ಅಸನಿ ಚಂಡಮಾರುತ ಎಫೆಕ್ಸ್ ನಿಂದಾಗಿ ನಗರದೆಲ್ಲೆಡೆ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

- Advertisement -

ಹಳೆ ಮದ್ರಾಸ್ ರೋಡ್, ಹೊಸೂರು ರಸ್ತೆ ಹಾಗೂ ಮೈಸೂರು ರಸ್ತೆ ಸೇರಿದಂತೆ ನಗರದ ಬಹುತೇಕ ಭಾಗಗಳಲ್ಲಿ ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಯಿತು. ನಗರದ ಕೆಲವು ರಸ್ತೆಗಳಲ್ಲಿ ನೀರು ತುಂಬಿದ್ದರಿಂದ ಸವಾರರು ಪರಿತಪಿಸಿದರು.

ಜೆಪಿ ನಗರ, ಜಯನಗರ, ಲಾಲ್ ಬಾಗ್, ಚಿಕ್ಕಪೇಟೆ, ಮೆಜೆಸ್ಟಿಕ್, ಮಲ್ಲೇಶ್ವರಂ, ರಾಜಾಜಿನಗರ, ಯಶವಂತಪುರ, ಎಂಜಿ ರೋಡ್, ಕಬ್ಬನ್ ಪಾರ್ಕ್, ವಿಜಯನಗರ, ರಾಜರಾಜೇಶ್ವರಿ ನಗರ, ಕೆಂಗೇರಿ, ಮಾಗಡಿ ರೋಡ್, ಮೈಸೂರು ರಸ್ತೆ ಸೇರಿ ಬೆಂಗಳೂರಿನ ಬಹುತೇಕ ಕಡೆ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗಿದೆ.

- Advertisement -

ಬೆಂಗಳೂರಿನಲ್ಲಿ ಮಂಗಳವಾರ, ಬುಧವಾರ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ನೀಡಿದ್ದು, ವರ್ಷಧಾರೆ ಮುಂದುವರಿಯುವ ಸಾಧ್ಯತೆ ಇದೆ.

Join Whatsapp